ಕಾರವಾರ: ಮುಂಡಗೋಡ ತಾಲೂಕಿನ ಕೊಡಂಬಿ ಗ್ರಾಮ ಪಂಚಾಯತ ವ್ಯಾಪ್ತಿಯ ಕಾಂಗ್ರೆಸ್ ಕಾರ್ಯಕರ್ತರು ಕಾಂಗ್ರೆಸ್ ತೊರೆದು ಭಾರತೀಯ ಜನತಾ ಪಕ್ಷವನ್ನು ಸೇರ್ಪಡೆಗೊಂಡರು. ಕಾಂಗ್ರೆಸ್ ತೊರೆದ ಬಿಜೆಪಿ ಸೇರ್ಪಡೆಗೊಂಡ ಕಾರ್ಯಕರ್ತರುಗಳಿಗೆ ಮಾನ್ಯ ಸಚಿವರಾದ ಶಿವರಾಮ ಹೆಬ್ಬಾರ್ ಅವರು ಪಕ್ಷದ ಶಾಲು ಹಾಕಿ ಅತ್ಯಂತ ಭಾರತೀಯ ಜನತಾ ಪಕ್ಷಕ್ಕೆ ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ಶಕ್ತಿ ಕೇಂದ್ರದ ಅಧ್ಯಕ್ಷರಾದ ಹಾಲಪ್ಪ ಕೊಡಣ್ಣನವರ, ಪ್ರಮುಖರಾದ ಗುಡ್ಡಪ್ಪ ಕಾತೂರ, ಮಹೇಂದ್ರಪ್ಪ ದ್ಯಾಮಕ್ಕನವರ, ವೆಂಕಟೇಶ ಗುತ್ತಲ ಉಪಸ್ಥಿತರಿದ್ದರು.