ಉತ್ತರಕನ್ನಡ

ಕಾರವಾರ: ಹೋವರ್ ಕ್ರಾಫ್ಟ್ ಬೇಸ್ ಮಾಡಲು ಸ್ಥಳೀಯರ ಸಹಮತಿಯೂ ಅಗತ್ಯ

ಕಾರವಾರ: ನಗರದ ಕಡಲತೀರ ವ್ಯಾಪ್ತಿಯ ದಿವೇಕರ್ ಕಾಲೇಜಿನ ಬಳಿ ಕೋಸ್ಟ್ ಗಾರ್ಡ್ ನ ಹೋವರ್ ಕ್ರಾಫ್ಟ್ ನಿಲುಗಡೆ ಮಾಡುವ ಬೇಸ್ ಮಾಡಲು ಸ್ಥಳೀಯ ಮೀನುಗಾರರ ಸಹಮತಿಯ ಅಗತ್ಯವಿದೆ ಎಂದು ಭಾರತೀಯ ಕೋಸ್ಟ್ ಗಾರ್ಡ್ ಪಶ್ಚಿಮ ವಲಯ ಕಮಾಂಡರ್ ಮನೋಜ್ ಬಾಡಕರ ಹೇಳಿದ್ದಾರೆ.

ಅರ್ಗಾದ ಭಾರತೀಯ ಕೋಸ್ಟ್ ಗಾರ್ಡ್ ಕಚೇರಿಯಲ್ಲಿ ಶನಿವಾರ ಪತ್ರಿಕಾಗೋಷ್ಠಿ ನಡೆಸಿದ ಅವರು, ಸಮುದ್ರದಲ್ಲಿ ಮೂಲಕ ನಡೆಯಬಹುದಾದ ಯಾವುದೇ ಅಕ್ರಮಗಳನ್ನು ತಡೆಯಲು ಕೋಸ್ಟ್ ಗಾರ್ಡ್ ಗೆ ಹೋವರ್ ಕ್ರಾಫ್ಟ್ ಸಹ ಅಗತ್ಯ.

ಕಾರವಾರದ ದಿವೇಕರ್ ಕಾಲೇಜಿನ ಬಳಿಕ ಕೋಸ್ಟ್ ಗಾರ್ಡ್ ಕಚೇರಿ, ಸೇರಿದಂತೆ ಹೋವರ್ ಕ್ರಾಫ್ಟ್ ನಿಲುಗಡೆ ಮಾಡುವ ವ್ಯವಸ್ಥೆ ಮಾಡುವ ಉದ್ದೇಶವಿತ್ತು. ಆದರೆ ಸ್ಥಳೀಯರು ಹಾಗೂ ಮೀನುಗಾರರು ವಿರೋಧ ವ್ಯಕ್ತಪಡಿಸಿದ್ದರಿಂದ ಯೋಜನೆಯನ್ನು ಕೈಬಿಡಲಾಗಿತ್ತು. ಅದಾದ ಬಳಿಕ ಅಮದಳ್ಳಿಯಲ್ಲಿ ಕೋಸ್ಟ್ ಗಾರ್ಡ್ ಕಚೇರಿ ನಿರ್ಮಾಣಕ್ಕೆ 25 ಎಕರೆ ಭೂಮಿ ಖರೀದಿ ಮಾಡಲಾಗಿದೆ. ಕಚೇರಿ ನಿರ್ಮಾಣ ಪ್ರಗತಿಯಲ್ಲಿದೆ. ಬರುವ ಎರಡು ವರ್ಷಗಳಲ್ಲಿ ಕಚೇರಿ ನಿರ್ಮಾಣ ಪೂರ್ಣಗೊಳ್ಳುವ ನಿರೀಕ್ಷೆ ಇದೆ. ಆದರೆ ಹೋವರ್ ಕ್ರಾಫ್ಟ್ ಗಾಗಿ ಸೂಕ್ತ ಸ್ಥಳ ಇಲ್ಲದೆ ಇದ್ದರಿಂದ ಈ ಹಿಂದೆ ಯೋಜಿಸಿದ್ದ ಸ್ಥಳವೇ ಸೂಕ್ತ ಸ್ಥಳವಾಗಿದ್ದರಿಂದ ಚಿಂತನೆ ನಡೆಸಲಾಗಿದೆ. ಆದರೆ ಸ್ಥಳೀಯ ಮೀನುಗಾರರ ವಿರೋಧ ಇದ್ದರಿಂದ ಯಾವುದೇ ಕ್ರಮಕೈಗೊಂಡಿಲ್ಲ. ಸ್ಥಳೀಯ ಮೀನುಗಾರರ ವಿರೋಧದ ನಡುವೆ ಯಾವುದೇ ಬೇಸ್ ಮಾಡಲು ಸಾಧ್ಯವಾಗದ ಮಾತು. ಮೀನುಗಾರರು ಕೋಸ್ಟ್ ಗಾರ್ಡ್ ಕಣ್ಣು ಇದ್ದ ಹಾಗೇ ಎಂದರು. ಈ ವಿಷಯದ ಬಗ್ಗೆ ಮೀನುಗಾರರ ಜೊತೆ ಚರ್ಚೆ ನಡೆಸಲಾಗುತ್ತಿದೆ ಎಂದರು.

Sneha Gowda

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

9 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

10 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

10 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

10 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

10 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

11 hours ago