ಕಾರವಾರ: ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಅವರು ಹಾಗೂ ವಿಧಾನಸಭಾಧ್ಯಕ್ಷ ವಿಶ್ವೇಶ್ವರ್ ಹೆಗಡೆ ಕಾಗೇರಿ ಅವರು ಶುಕ್ರವಾರ ಯಲ್ಲಾಪುರ – ಶಿರಸಿ ತಾಲೂಕನ್ನು ಸಂಪರ್ಕಿಸುವ ಹಿತ್ಲಳ್ಳಿ ಗ್ರಾಮ ಪಂಚಾಯತ ವ್ಯಾಪ್ತಿಯ ಗಣೇಶ ಫಾಲ್ಸ್ ಹಳ್ಳಕ್ಕೆ 9.95 ಕೋಟಿ ರೂಪಾಯಿ ವೆಚ್ಚದಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆಯನ್ನು ನೆರವೇರಿಸುವುದರ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಹಿತ್ಲಳ್ಳಿ ಗ್ರಾಮ ಪಂಚಾಯತ ಅಧ್ಯಕ್ಷರಾದ ಪ್ರಸನ್ನ ಭಟ್, ಉಮ್ಮಚಗಿ ಗ್ರಾಮ ಪಂಚಾಯತ ಅಧ್ಯಕ್ಷರಾದ ರೂಪಾ ಪೂಜಾರಿ ಸೇರಿದಂತೆ ಗ್ರಾಮ ಸದಸ್ಯರು, ಸ್ಥಳೀಯ ಮುಖಂಡರು, ಪಕ್ಷದ ವಿವಿಧ ಸ್ಥರದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.