News Karnataka Kannada
Tuesday, May 07 2024
ಉತ್ತರಕನ್ನಡ

ಕಾರವಾರ: ಮಹಿಳೆ ಸುರಕ್ಷಿತ ಎನ್ನುವ ಸಂದೇಶ ಸಾರಲು ಸೈಕಲ್ ಯಾತ್ರೆ

Karwar: Cycle yatra to spread the message that a woman is safe
Photo Credit : By Author

ಕಾರವಾರ: ಮಹಿಳೆಯರು ಸುರಕ್ಷಿತವಾಗಿದ್ದಾರೆ ಎನ್ನುವ ಸಂದೇಶವನ್ನು ವಿಶ್ವಕ್ಕೆ ಸಾರಬೇಕು ಎನ್ನುವ ಗುರಿಯೊಂದಿಗೆ ಯುವತಿಯೊಬ್ಬಳು ಒಬ್ಬಂಟಿಯಾಗಿ ಸೈಕಲ್ ಯಾತ್ರೆ ಆರಂಭಿಸಿ ರವಿವಾರ ಗೋವಾ ಮಾರ್ಗವಾಗಿ ಆಗಮಿಸಿ ಕಾರವಾರಕ್ಕೆ ತಲುದ್ದಾಳೆ.

ಮಧ್ಯಪ್ರದೇಶದ ರಾಜಗಢ ಜಿಲ್ಲೆಯ ಆಶಾ ಮಾಲ್ವಿ ಒಬ್ಬಂಟಿಯಾಗಿ ಸೈಕಲ್ ಯಾತ್ರೆ ಕೈಗೊಂಡಿದ್ದು, ಈ ಮೂಲಕ ಭಾರತ ಮಹಿಳೆಯರು ಸುರಕ್ಷಿತವಾಗಿದ್ದಾರೆ ಎನ್ನುವುದನ್ನು ನಿರೂಪಿಸಲು ಭಾರತ ಸೈಕಲ್ ಯಾತ್ರೆ ಕೈಗೊಂಡಿರುವುದಾಗಿ ತಿಳಿಸಿದ್ದಾರೆ. ಮಧ್ಯಪ್ರದೇಶದ ಭೋಪಾಲ್‌ನಿಂದ ನ. ೧ ರಿಂದ ಯಾತ್ರೆ ಆರಂಭಿಸಿರುವ ಯುವತಿ ೨೦ ಸಾವಿರ ಕಿ.ಮೀ ಸೈಕಲ್ ಮೂಲಕ ಪ್ರಯಾಣಿಸುವ ಗುರಿ ಹೊಂದಿದ್ದಾಳೆ.

ಈಗಾಗಲೇ ಮಧ್ಯಪ್ರದೇಶ, ಗುಜರಾತ್, ಮಹಾರಾಷ್ಟç ಹಾಗೂ ಗೋವಾ ಮಾರ್ಗವಾಗಿ ೩೭ ಸಾವಿರ ಕಿ.ಮೀ ಕ್ರಮಿಸಿ ಕರ್ನಾಟಕದ ಕಾರವಾರ ಪ್ರವೇಶಿಸಿದ್ದಾಳೆ. ಭಾರತದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳಿಂದಾಗಿ ಮಹಿಳೆಯರಿಗೆ ದೇಶದಲ್ಲಿ ಸುರಕ್ಷತೆಯಿಲ್ಲ ಎನ್ನುವ ಅಭಿಪ್ರಾಯ ಮೂಡಿದೆ. ಆದರೆ ಇಲ್ಲಿನ ಮಹಿಳೆಯರು ಸುರಕ್ಷಿತವಾಗಿದ್ದಾರೆ ಎನ್ನುವ ಸಂದೇಶವನ್ನು ವಿಶ್ವಕ್ಕೆ ಸಾರಬೇಕು ಎನ್ನುವ ಗುರಿಯೊಂದಿಗೆ ಸೈಕಲ್ ಯಾತ್ರೆ ಕೈಗೊಂಡಿರುವುದಾಗಿ ಆಶಾ ಮಾಲ್ವಿ ತಿಳಿಸಿದರು. ಪ್ರತಿನಿತ್ಯ ಯಾವ ಸ್ಥಳಕ್ಕೆ ತೆರಳಬೇಕು ಎನ್ನುವ ಗುರಿಯೊಂದಿಗೆ ಸುಮಾರು ೭೦ ರಿಂದ ೧೫೦ ಕಿ.ಮೀ ವರೆಗೆ ಸೈಕಲ್ ತುಳಿಯುತ್ತೇನೆ. ಬಳಿಕ ಅಲ್ಲಿನ ಯಾತ್ರಿ ನಿವಾಸಗಳಲ್ಲಿ ವಸತಿ ಮಾಡಿ ಪ್ರಯಾಣ ಮುಂದುವರಿಸುತ್ತೇನೆ.

ಊಟ ತಿಂಡಿ ಎಲ್ಲವೂ ಸ್ವಂತ ಕರ್ಚಿನಲ್ಲಿ ಮಾಡುತ್ತಿದ್ದರು, ಕೆಲವರು ಧನಸಹಾಯ ಮಾಡಿದ್ದಾರೆ. ಹೀಗೆ ತೆರಳುವಾಗ ಶಾಲಾ ಕಾಲೇಜುಗಳಿಗೆ ತೆರಳಿ ದೇಶದಲ್ಲಿ ಮಹಿಳೆಯರು ಸುರಕ್ಷಿತವಾಗಿರುವ ಬಗ್ಗೆ ಮತ್ತು ಮಹಿಳೆಯರ ರಕ್ಷಣೆ ಬಗ್ಗೆ ಭಾರತ ಹೊಂದಿರುವ ಕಾಳಜಿ ಬಗ್ಗೆ ಮಾಹಿತಿ ನೀಡುತ್ತಿರುವುದಾಗಿ ತಿಳಿಸಿದರು. ಇನ್ನು ಯಾತ್ರೆಯನ್ನು ದೆಹಲಿಯಲ್ಲಿ ಪೂರ್ಣಗೊಳಿಸಲಿದ್ದು, ಯಾತ್ರೆ ಪೂರ್ಣಗೊಳ್ಳುವ ಸಂದರ್ಭದಲ್ಲಿ ರಾಷ್ಟçಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಬೇಕೆಂಬ ಬಯಕೆ ಇದೆ ಎಂದು ಆಶಾ ಮಾಲ್ವಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು