News Karnataka Kannada
Tuesday, May 07 2024
ಉತ್ತರಕನ್ನಡ

ಕಾರವಾರ: ನಗರಸಭೆ ಆಯುಕ್ತರ ವಿರುದ್ಧ ತನಿಖೆಗೆ ಆಗ್ರಹ

Karwar: Demand for probe against Municipal Commissioner
Photo Credit : By Author

ಕಾರವಾರ: ಇಲ್ಲಿನ ಕಾರವಾರ ನಗರಸಭೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಹಾಗೂ ಹಾಲಿ ಆಯುಕ್ತರಿಂದ ಅವರಿಂದ ಆಗಿರುವ ನಡೆದಿದೆ ಎನ್ನಲಾದ ಭ್ರಷ್ಟಾಚಾರದ ಕುರಿತಾಗಿ ನ್ಯಾಯಾಲಯವು ಆರು ವಾರದೊಳಗೆ ವರದಿ ಸಲ್ಲಿಸುವಂತೆ ಸೂಚಿಸಿದೆ ಎಂದು ರಾಜ್ಯ ಅಲ್ಪ ಸಂಖ್ಯಾತರ ಆಯೋಗದ ಮಾಜಿ ಸದಸ್ಯರ ಅಂತೋನ ಫರ್ನಾಂಡೀಸ್ ಹೇಳಿದರು.

ಅವರು ಪತ್ರಿಕಾಭವನದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಆರ್.ಪಿ.ನಾಯ್ಕ ಅವರು ಅಂಕೋಲಾ, ಯಲ್ಲಾಪುರ, ಹೊನ್ನಾವರ ಮತ್ತು ಕಾರವಾರದಲ್ಲಿ ಕಾರ್ಯನಿರ್ವಹಿಸುವ ವೇಳೆ ಟೆಂಡರ್ ಪಾಲನೆ ಮಾಡದೇ ಇರುವದು, ಹಾಗೂ ವಿವಿಧ ಕಾಮಗಾರಿಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿರುವುದು ಹೀಗೆ ವಿವಿಧ ರೀತಿಯ ಭ್ರಷ್ಟಾಚಾರಗಳು ಅವರ ಸೇವಾವಧಿಯಲ್ಲಿ ನಡೆದಿದೆ ಎಂದರು.

ತಾವು ಅವರ ಭ್ರಷ್ಟಾಚಾರದ ಬಗ್ಗೆ ಸಾರ್ವಜನಿಕ ಹಿತಾಸಕ್ತಿ ದಾವೆಯನ್ನು ಹಾಕಿದ್ದು, ನ್ಯಾಯಾಲಯವು ಆರು ವಾರದೊಳಗೆ ಸಂಬಂಧಿಸಿದ ಇಲಾಖೆ ಮತ್ತು ಅಧಿಕಾರಿಗಳಿಗೆ ವರದಿಯನ್ನು ಸಲ್ಲಿಸುವಂತೆ ಸೂಚಿಸಿದೆ. ಇದನ್ನು ಸ್ವಾಗತಿಸುತ್ತೇನೆ ಎಂದರು. ನಗರಸಭೆಯ ಆಯುಕ್ತರು ನಿಯಮಗಳನ್ನು ಗಾಳಿಗೆ ತೂರಿ ಸರಕಾರದ ಹಣವನ್ನು ಪೋಲು ಮಾಡಲಾಗಿದೆ. ಸರಕಾರಕ್ಕೆ ನಷ್ಟ ಮಾಡುವಂತಾಗಿದೆ. ಅವ್ಯವಹಾರ ಮತ್ತು ಭ್ರಷ್ಟಾಚಾರ ನಡೆದಿರುವದನ್ನು ತಡೆಯುವದಾಗಿದೆ ಹೊರತು ಅವರ ಮೇಲೆ ಮಾಡುತ್ತಿರುವ ಆರೋಪವಲ್ಲ ಎಂದರು. ಈಗಾಗಲೇ ಜಿಲ್ಲಾಧಿಕಾರಿಗಳು ಅವರ ಸೇವಾವಧಿಯಲ್ಲಿ ವಿವಿಧ ಕಡೆಯಲ್ಲಿ ನಡೆದಿರುವ ಅವ್ಯವಹಾರದ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ತಮ್ಮ ವರದಿಯನ್ನು ಸಲ್ಲಿಸಿದ್ದಾರೆ. ಅವರ ಭ್ರಷ್ಟಾಚಾರದ ವಿರುದ್ದ ತಮ್ಮ ಹೋರಾಟ ನಿರಂತರವಾಗಿ ಮುಂದುವರಿಯಲಿದೆ ಎಂದು ಅಂತೋನ ಫರ್ನಾಂಡೀಸ್ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ದತ್ತಾನಂದ ಸಾಳಸ್ಕರ್, ನಟರಾಜ್ ದುರ್ಗೇಕರ್, ಶರದ್ ತಾರಿ, ನಳರಾಜ್ ದುಗೇಕರ್ ಹಾಗೂ ಇನ್ನಿತರರು ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು