News Karnataka Kannada
Monday, April 29 2024
ಉತ್ತರಕನ್ನಡ

ಕಾರವಾರ: ಸದಾಶಿವಗಡ ಔರಾದ್ ರಾಜ್ಯ ಹೆದ್ದಾರಿ ಅಭಿವೃದ್ಧಿ

Development of Sadashivagad-Aurad State Highway at a cost of Rs 2.30 crore
Photo Credit : By Author

ಕಾರವಾರ: ಸರ್ಕಾರದ ವಿಶೇಷ  ಅನುದಾನದಲ್ಲಿ ಸದಾಶಿವಗಡ ಔರಾದ್ ರಾಜ್ಯ ಹೆದ್ದಾರಿಯಲ್ಲಿ 2.30 ಕೋಟಿ ರೂ. ವೆಚ್ಚದಲ್ಲಿ ಡಿವೈಡರ್, ಬೀದಿ ದೀಪ ಅಳವಡಿಸಿ, ಅಭಿವೃದ್ಧಿ ಪಡಿಸಿದ್ದನ್ನು ಅತ್ಯಂತ ಸಂತಸದಿಂದ ಇಂದು ಲೋಕಾರ್ಪಣೆ ಮಾಡಿದ್ದೇನೆ ಎಂದು ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದ ಶಾಸಕಿ ರೂಪಾಲಿ ಎಸ್. ನಾಯ್ಕ ಹೇಳಿದರು.

ಕಾರವಾರ ತಾಲ್ಲೂಕಿನ ಚಿತ್ತಾಕುಲ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಔರಾದ ಸದಾಶಿವಗಡ ರಾಜ್ಯ ಹೆದ್ದಾರಿ – 34 ರ ಕಿ.ಮೀ 725.34 ರಲ್ಲಿ ಸುರಕ್ಷತಾ ಕಾಮಗಾರಿ ಹಾಗೂ ಬೀದಿ ದೀಪ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಈ ರಸ್ತೆ ಅಗಲವಾಗಿ ನಿರ್ಮಾಣ ಮಾಡಬೇಕು ಎಂಬುದು ಹಲವು ವರ್ಷದ ಬೇಡಿಕೆಯಾಗಿತ್ತು. ಗ್ರಾಮ ಪಂಚಾಯತಿಯನ್ನೂ ಕೂಡ ಪಟ್ಟಣದಂತೆ ಅಭಿವೃದ್ಧಿ ಮಾಡುವುದು ಅವಶ್ಯಕವಾಗಿದೆ. ಅಭಿವೃದ್ಧಿ ದೃಷ್ಟಿಯಿಂದ ಚಿತ್ತಾಕುಲದ ಚಿತ್ರಣವನ್ನು ಬದಲಾಯಿಸುವುದಾಗಿ ಹೇಳಿದ್ದು, ಅದರಂತೆ ನಾನು ನಡೆದುಕೊಂಡಿದ್ದೇನೆ. ಇನ್ನೂ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನವನ್ನು ಒದಗಿಸಲಾಗಿದೆ ಎಂದರು.

ಸ್ಥಳೀಯ ಯುವಕರು ಉದ್ಯೋಗಕ್ಕಾಗಿ ಪಕ್ಕದ ರಾಜ್ಯ ಗೋವಾಕ್ಕೆ ಕಡಿಮೆ ಸಂಬಳಕ್ಕೆ ಹೋಗುತ್ತಿದ್ದಾರೆ. ಅದಕ್ಕಾಗಿ ಮುಡಿಗೇರಿಯಲ್ಲಿ ಕೈಗಾರಿಕೆ ಸ್ಥಾಪನೆಗಾಗಿ ನಿರಂತರ ಪ್ರಯತ್ನ ಮಾಡುತ್ತಿದ್ದೇನೆ. ಕೇಂದ್ರ ಸಚಿವರಾದ ಅಮೀತ್‌ಶಾ, ರಾಜನಾಥ ಸಿಂಗ್‌, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೈಗಾರಿಕಾ ಸಚಿವ ಮುರಗೇಶ ನಿರಾಣಿ ಅವರಲ್ಲಿ ನಿರಂತರವಾಗಿ ಪ್ರಯತ್ನಿಸುತ್ತಿದ್ದೇನೆ. ಶೀಘ್ರದಲ್ಲಿ ಕೈಗಾರಿಕೆ ಸ್ಥಾಪನೆಯಾಗುವ ಸಾಧ್ಯತೆ ಇದೆ ಎಂದರು.

ಮಾಜಾಳಿ ಬಂದರು ನಿರ್ಮಾಣಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಅನುಮೋದನೆ ನೀಡಿದ್ದಾರೆ. 250 ಕೋಟಿಗೂ ಹೆಚ್ಚಿನ ಮೊತ್ತದಲ್ಲಿ ಬಂದರು ನಿರ್ಮಾಣವಾಗಲಿದೆ. ಉದ್ಯೋಗ ಸೃಷ್ಠಿಗೆ ಅನುಕೂಲವಾಗಲಿದೆ. ಬಂದರು ನಿರ್ಮಾಣಕ್ಕೆ ಎಲ್ಲರೂ ಸಹಕಾರ ಬೇಕು.  ಇದು ನಿರ್ಮಾಣವಾದರೆ ನಮ್ಮ ಜನರಿಗೆ ಅನುಕೂಲವಾಗಲಿದೆ ಎಂದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷ ಸ್ವಾತಿ ದೇಸಾಯಿ, ಉಪಾಧ್ಯಕ್ಷ ರೀನಾ ವೈಂಗಣಕರ, ಬಿಜೆಪಿ ಗ್ರಾಮೀಣ ಮಂಡಲದ ಅಧ್ಯಕ್ಷರಾದ ಸುಭಾಷ ಗುನಗಿ, ಪಂಚಾಯತಿ ಸರ್ವ ಸದಸ್ಯರು ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು