News Karnataka Kannada
Sunday, May 05 2024
ಉತ್ತರಕನ್ನಡ

ಕಾರವಾರ: ಅರಣ್ಯವಾಸಿಗಳ ಪರ ಅಧಿವೇಶನದಲ್ಲಿ ನಿರ್ಣಯಿಸದಿದ್ದಲ್ಲಿ ಗಾಂಧಿ ಜಯಂತಿಯಂದು ಧರಣಿ

Karavar
Photo Credit : By Author

ಕಾರವಾರ: ಮಳೆಗಾಲದ ವಿಧಾನಸಭಾ ಅಧಿವೇಶನದಲ್ಲಿ ಚರ್ಚಿಸಿ ಸುಪ್ರೀಂ ಕೋರ್ಟ್ ನಲ್ಲಿ ತಿದ್ದುಪಡಿ ಪ್ರಮಾಣ ಪತ್ರ ಸಲ್ಲಿಸಲು ನಿರ್ಣಯಿಸದಿದ್ದಲ್ಲಿ ಗಾಂಧಿ ಜಯಂತಿಯ ದಿನ ವಿಧಾನಸಭಾ ಅಧ್ಯಕ್ಷರ ಶಿರಸಿ ಮನೆಯ ಮುಂದೆ ಅರಣ್ಯ ಅತಿಕ್ರಮಣದಾರರು ಧರಣಿ ಮಾಡುವರು ಎಂದು ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ತಿಳಿಸಿದ್ದಾರೆ.

ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ತಿರಸ್ಕಾರವಾಗಿರುವ ಅರಣ್ಯ ಅತಿಕ್ರಮಣದಾರರನ್ನು ಹಂತಹಂತವಾಗಿ ಒಕ್ಕಲೆಬ್ಬಿಸಲಾಗುವುದೆಂದು ಸುಪ್ರೀಂ ಕೋರ್ಟಿನಲ್ಲಿ ಪರಿಸರವಾದಿಗಳು ದಾಖಲಿಸಿದ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯಲ್ಲಿ ಈ ಹಿಂದೆಯೇ ರಾಜ್ಯ ಸರಕಾರ ಪ್ರಮಾಣ ಪತ್ರ ಸಲ್ಲಿಸಿದ್ದು ಇರುತ್ತದೆ. ಅಧಿವೇಶನದಲ್ಲಿ ನಿರ್ಣಯಿಸದಿದ್ದಲ್ಲಿ ಜಿಲ್ಲೆಯ ಹಾಜಿ ಮತ್ತು ಮಾಜಿ ಜನಪ್ರತಿನಿಧಿಗಳ ಮನೆಯ ಮುಂದೆ ಧರಣಿ ಜರುಗಿಸಲಾಗುವುದೆಂಬ ಫೆಬ್ರುವಯಲ್ಲಿ ನಡೆದ ಹೋರಾಟಗಾರರ ವೇದಿಕೆಯ ನಿರ್ಣಯದಂತೆ ಧರಣಿ ಕಾರ್ಯಕ್ರಮ ಜರುಗಿಸಲಾಗುವುದೆಂದು ಅವರು ಹೇಳಿದರು.

ಈ ಹಿನ್ನೆಲೆಯಲ್ಲಿ ಕಳೆದ ಮೂರು ಅಧಿವೇಶನದಿಂದಲೂ ಅರಣ್ಯವಾಸಿಗಳ ಪರ ತಿದ್ದುಪಡಿ ಪ್ರಮಾಣ ಪತ್ರ ವಿಧಾನ ಸಭೆಯಲ್ಲಿ ನಿರ್ಣಯಿಸಿ ಸುಫ್ರೀಂ ಕೋರ್ಟಿಗೆ ಸಲ್ಲಿಸಲು ವೇದಕೆಯು ಅಗ್ರಹಿಸಿತು. ಅಲ್ಲದೇ, ಮಳೆಗಾಲದ ಅಧಿವೇಶನದಲ್ಲಿಯೂ ಚರ್ಚಿಸಿ ನಿರ್ಣಯಿಸಲು ಸಭಾಧ್ಯಕ್ಷರಿಗೆ ಪತ್ರ ರವಾನಿಸಲಾಗಿದೆ ಎಂದು ಅವರು ತಿಳಿಸಿದರು.

ಅರಣ್ಯವಾಸಿಗಳು ನಿರಾಶ್ರಿತರಾಗುವ ಆತಂಕ : ಜಿಲ್ಲೆಯಲ್ಲಿ ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ಒಟ್ಟು ೮೯,೧೬೭ ಅರಣ್ಯ ಅತಿಕ್ರಮಣದಾರರು ಅರ್ಜಿ ಸಲ್ಲಿಸಿದ್ದು ಅವುಗಳಲ್ಲಿ ೬೯,೭೭೩ ಅರ್ಜಿಗಳು ತೀರಸ್ಕಾರವಾಗಿದ್ದು ಕೇವಲ ೨,೮೫೫ ಅರ್ಜಿಗಳಿಗೆ ಮಾತ್ರ ಹಕ್ಕು ಮಾನ್ಯತೆ ದೊರಕಿದೆ. ಸುಫ್ರೀಂ ಕೋರ್ಟನಲ್ಲಿ ಒಕ್ಕಲೆಬ್ಬಿಸುವ ಕುರಿತು ಅಂತಿಮ ವಿಚಾರಣೆ ಜರಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರವು ಅರಣ್ಯವಾಸಿಗಳ ಪರ ತಿದ್ದುಪಡಿ ಪ್ರಮಾಣ ಪತ್ರ ಸಲ್ಲಿಸದಿದ್ದಲ್ಲಿ ಸುಫ್ರೀಂ ಕೋರ್ಟನಿಂದ ವ್ಯತಿರಿಕ್ತವಾದ ಆದೇಶಕ್ಕೆ ಕಾರಣವಾಗಿ ಅರಣ್ಯವಾಸಿಗಳು ನಿರಾಶ್ರಿತರಾಗುವರೆಂದು ರವೀಂದ್ರ ನಾಯ್ಕ ಆತಂಕ ವ್ಯಕ್ತಪಡಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು