ಕಾರವಾರ: ಕಳೆದ 3 ತಿಂಗಳ ಹಿಂದೆ ನಡೆಸಿದ ಸಭೆಯಲ್ಲಿ ಚರ್ಚಿಸಲಾದ ಹೆಚ್ಚಿನ ಕುಂದು ಕೊರತೆಗಳು ಶೀಘ್ರದಲ್ಲಿ ಪರಿಹಾರವಾಗುವಂತೆ ಅಧಿಕಾರಿಗಳು ಗಮನಹರಿಸಬೇಕು,ತಪ್ಪಿದ್ದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಪ್ರಿಯಾಂಗಾ ಎಂ ಸೂಚಿಸಿದರು.
ಇಲ್ಲಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಆರೋಗ್ಯ ಇಲಾಖೆಯ ಜಿಲ್ಲಾ ಮಟ್ಟದ ಆಶಾ ಕಾರ್ಯಕರ್ತೆಯರ ಕುಂದು ಕೊರತೆ ನಿವಾರಣ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಆಶಾ ಕಾರ್ಯಕರ್ತೆಯರು ಇನ್ನು ಪರಿಹಾರವಾಗಬೇಕಾದ ಕುಂದು ಕೊರತೆಗಳ ಕುರಿತು ಚರ್ಚೆ ನಡೆಸಿ ಮುಂದಿನ ದಿನಗಳಲ್ಲಿ ಸೂಕ್ತ ಪರಿಹಾರ ಒದಗಿಸಲಾಗುವುದು ಎಂದು ಎ.ಐ.ಯು.ಟಿ.ಯು.ಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕತೆಯರ ಸಂಘದ ಸಲಹೆಗಾರ ಗಂಗಾಧರ್ ಹೇಳಿದರು.
ಸಭೆಯಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿಡಾ ರಮೇಶ ರಾವ್, ಜಿಲ್ಲೆಯ ಎಲ್ಲಾ ಕಾರ್ಯಕ್ರಮಾಧಿಕಾರಿಗಳು, ತಾಲೂಕ ಆರೋಗ್ಯಾಧಿಕಾರಿಗಳು, ಎನ್.ಎಚ್.ಎಮ್ ನ ಅಧಿಕಾರಿ ಸಿಬ್ಬಂದಿಗಳು, ತಾಲೂಕ ಆಶಾ ಮೇಲ್ವಿಚಾರಕರು, ತಾಲೂಕ ಆಶಾ ಪ್ರತಿನಿಧಿಗಳು,ಎ.ಐ.ಯು.ಟಿ.ಯು.ಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕತೆಯರ ಸಂಘದ ಅಧ್ಯಕ್ಷೆ ಪದ್ಮ ಚಲವಾದಿ ಹಾಗೂ ಜಿಲ್ಲಾ ಸಮಿತಿಯ ಇತರೆ ಸದಸ್ಯರು ಸಭೆಯಲ್ಲಿ ಇದ್ದರು.