ಕಾರವಾರ: ನಗರದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಬೀದಿ ನಾಟಕ ಕಲಾತಂಡಗಳ ಒಕ್ಕೂಟ ಕಾರವಾರ ಉತ್ತರಕನ್ನಡ ಜಿಲ್ಲಾಮಟ್ಟದ ಬೀದಿನಾಟಕೋತ್ಸವ ಮತ್ತು ಜಿಲ್ಲಾ ಮಟ್ಟದ ಬೀದಿ ರಂಗ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.
ಬೀದಿ ನಾಟಕದ ಕಲಾವಿದರು ಇಲ್ಲದಿದ್ದರೆ, ನಮ್ಮ ದೇಶ ಇಷ್ಟು ಮುಂದಕ್ಕೆ ಬರಲು ಸಾಧ್ಯವಾಗಿರುತ್ತಿರಲಿಲ್ಲ. ಅವರಿಂದ ಇಲಾಖೆಯ ಕಾರ್ಯಕ್ರಮಗಳನ್ನು ಪ್ರತಿಯೊಬ್ಬರಿಗೂ ತಲುಪಿಸಲು ಪ್ರಮುಖ ಪಾತ್ರವಹಿಸುತ್ತದೆ. ಯೋಜನೆಗಳು ಜನರ ಮನಸ್ಸಿಗೆ ತಲುಪುವಂತೆ ಮಾಡುತ್ತಿರುವ ಕಲಾವಿದರ ಕಾರ್ಯ ಶ್ಲಾಘನೀಯ.
ಹಾಡು, ನಾಟಕ ರೂಪದಲ್ಲಿ ಜನರಿಗೆ ತಲುಪಿಸುತ್ತಿದ್ದಾರೆ. ಸರ್ಕಾರದ ಯೋಜನೆಗಳನ್ನು ತಲುಪಿಸಲು ಪರಿಣಾಮಕಾರಿಯಾಗಿದೆ. ಕಲಾವಿದರ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತರಲಾಗುವುದು. ಈ ಸಂದರ್ಭದಲ್ಲಿ ಸಂಘಟನೆ ಪ್ರಮುಖರು, ಇಲಾಖೆ ಅಧಿಕಾರಿಗಳು ಸಾರ್ಬಜನಿಕರು ಇದ್ದರು.