News Karnataka Kannada
Tuesday, May 07 2024
ಉತ್ತರಕನ್ನಡ

ಕಾರವಾರ: ರಂಗಮಂದಿರದಲ್ಲಿ ಜಿಲ್ಲಾ ಮಟ್ಟದ ಯುವ ಜನೋತ್ಸವ

Karwar: District-level Youth Festival at Rangamandira
Photo Credit : By Author

ಕಾರವಾರ: ಯುವಜಾನೋತ್ಸವವು ಯುವ ಜನರಲ್ಲಿ ಜಾನಪದ ಕಲೆ, ಶಾಸ್ತ್ರೀಯ ಕಲೆ, ಸಂಗೀತ ಮತ್ತು ಸಂಸ್ಕೃತಿಯನ್ನು ಉತ್ತೇಜಿಸುವ ಒಂದು ಮಹತ್ತರ ವೇದಿಕೆಯಾಗಿದೆ ಎಂದು ಭೂಮಾಪನ ಇಲಾಖೆಯ ಉಪ ನಿರ್ದೇಶಕ ರುದ್ರಣ್ಣಗೌಡ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉತ್ತರಕನ್ನಡ ಕಾರವಾರ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ರಂಗ ಮಂದಿರದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಯುವಜನೋತ್ಸವವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು, ಉತ್ತರ ಕನ್ನಡ ಜಿಲ್ಲೆಯಿಂದ ಸಂಸ್ಕೃತಿಕ ಪ್ರತಿಭೆ ಹೊರ ಹೊಮ್ಮಲು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಒಂದು ವಿನೂತನ ಪ್ರಯತ್ನ ಮಾಡಿದೆ ಎಂದರು. ಇದರಿಂದಾಗಿ ಇಲ್ಲಿನ ವಿದ್ಯಾರ್ಥಿಗಳಿಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಲು ಒಂದು ಸುವರ್ಣ ಅವಕಾಶವನ್ನು ನೀಡಿದಂತಾಗಿದೆ ಎಂದರು.

ಬಳಿಕ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕ ಎನ್ ಪ್ರವೀಣ್ ಮಾತನಾಡಿ, ಯುವಜನೋತ್ಸವದಲ್ಲಿ ಪಾಲ್ಗೊಳ್ಳಲು ಎಲ್ಲಾ ವರ್ಗದ ಮಕ್ಕಳಿಗೂ ಅವಕಾಶವನ್ನು ಕಲ್ಪಿಸಲಾಗಿದೆ. ಅದರಲ್ಲೂ ವಿಶೇಷವಾಗಿ ದಯಾ ನಿಲಯ ವತಿಯಿಂದ ವಿಶೇಷ ಚೇತನ ಮಕ್ಕಳಿಗೂ ತಮ್ಮ ಸಂಸ್ಕೃತಿಕ ಪ್ರತಿಭೆಯನ್ನು ವ್ಯಕ್ತಪಡಿಸಲು ಇಲ್ಲಿ ಅವಕಾಶ ಕಲ್ಪಿಸಿ ಕೊಡಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಹಿರಿಯ ಕಲಾವಿದ ಮೋಹನ್, ಕಲಾವಿದ ಪುರುಷೋತ್ತಮ ಗೌಡ, ತರಬೇತಿದಾರ ಪ್ರಕಾಶ್ ರೇವನ್ಕರ್, ಅಧಿಕಾರಿಗಳು, ನಿರ್ಣಾಯಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು