News Karnataka Kannada
Monday, May 06 2024
ಉತ್ತರಕನ್ನಡ

ಕಾರವಾರ: ವಿಶೇಷ ಚೇತನರಿಗೆ ಪ್ರಮಾಣ ಪತ್ರ ನೀಡಲು ತೊಂದರೆ ನೀಡಬೇಡಿ- ರೂಪಾಲಿ ನಾಯ್ಕ

Karwar: Don't bother to issue certificates to differently-abled persons: Rupali Naik
Photo Credit : By Author

ಕಾರವಾರ: ವಿಶೇಷ ಚೇತನರಿಗೆ ಪ್ರಮಾಣ ಪತ್ರ ನೀಡಲು ತೊಂದರೆ ಕೊಡದೇ, ಸರ್ಕಾರದಿಂದ ಸಿಗುವ ಸೌಲಭ್ಯ ಜನರಿಗೆ ತಲುಪಿಸಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ದೂರವಾಣಿ ಮೂಲಕ ಶಾಸಕಿ ರೂಪಾಲಿ ಎಸ್. ನಾಯ್ಕ ಎಚ್ಚರಿಕೆ ನೀಡಿದರು.

ಸೋಮವಾರ ಕಾರವಾರ ತಹಸೀಲ್ದಾರರ ಕಚೇರಿಯಲ್ಲಿ ನಡೆದ ಸಾರ್ವಜನಿಕ ಅಹವಾಲು ಸ್ವೀಕರಿಸಿ ಸಮಸ್ಯೆ ಇತ್ಯರ್ಥಪಡಿಸಿದರು. ಸರ್ಕಾರದಿಂದ ಸಿಗುವ ಸೌಲಭ್ಯಗಳಾದ ವೃದ್ಧಾಪ್ಯದ ವೇತನ ಸೇರಿದಂತೆ ಇನ್ನಿತರ ಸೌಲಭ್ಯಗಳನ್ನು ಜನರಿಗೆ ತಲುಪಬೇಕು. ಸಮಸ್ಯೆಯನ್ನು ನಿವಾರಿಸಿ ಯೋಜನೆಯ ಲಾಭವನ್ನು ಜನರಿಗೆ ನೀಡಬೇಕು ಎಂದರು.

ಮಾಜಾಳಿ ವ್ಯಾಪ್ತಿಯಲ್ಲಿ ಮೀನುಗಾರರ ದೋಣಿಗಳಿಗೆ ಸೀಮೆ ಎಣ್ಣೆ ವಿತರಿಸದೆ ಸಮಸ್ಯೆ ಅನುಭವಿಸುತ್ತಿದ್ದಾರೆ. ಕೂಡಲೇ ಅವರಿಗೆ ಸೀಮೆ ಎಣ್ಣೆ ಪೂರೈಕೆ ಮಾಡುವಂತೆ ಮೀನುಗಾರಿಕೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಕಡವಾಡ ಕುಂಬಾರವಾಡ ನಿವಾಸಿಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗುತ್ತಿದ್ದು, ಕೈಗಾ ಮುಖ್ಯರಸ್ತೆಯ ಪೈಪ್ಲೈನ್ ನಿಂದ ನೀರನ್ನು ಪೂರೈಸುವಂತೆ ತಾ.ಪಂ.ಇಒ ಅವರಿಗೆ ಸೂಚಿಸಿದರು. ಬೀದಿಬದಿ ವ್ಯಾಪಾರ ಮಾಡುವವರಿಗೆ ಜಾಗದ ಸಮಸ್ಯೆ ಇರುವುದರಿಂದ ನನ್ನನ್ನು ಭೇಟಿ ಮಾಡಿ ಮನವಿ ಮಾಡಿದ್ದರು. ಇದನ್ನು ಮುತುವರ್ಜಿವಹಿಸಿ ಮೊದಲಿನಿಂದ ಕುಳಿತುಕೊಳ್ಳುತ್ತಿದ್ದ ಜಾಗವನ್ನು ನೋಡಿಕೊಂಡು ಅನುಕೂಲ ಕಲ್ಪಿಸಬೇಕು ಎಂದು ಪೌರಾಯುಕ್ತರಿಗೆ ಹಾಗೂ ಡಿವೈಎಸ್ಪಿ ಅವರಿಗೆ ತಿಳಿಸಿದರು. ಖಾರ್ಗೆಜೂಗ ರಸ್ತೆ ನಿರ್ಮಾಣ ವಿಳಂಬವಾಗಿದೆ. ಇದರಿಂದ ಜನರಿಗೆ ತೊಂದರೆಯಾಗುತ್ತಿದ್ದು, ಇದನ್ನು ಕೂಡಲೆ ಪ್ರಾರಂಭಿಸಬೇಕು. ತಕ್ಷಣ ಕಾಮಗಾರಿ ಪ್ರಾರಂಭಿಸಬೇಕು ಎಂದು ಲೋಕೋಪಯೋಗಿ ಇಲಾಖೆ ಇಂಜೀನಿಯರ್ ಹಾಗೂ ಗುತ್ತಿಗೆದಾರರಿಗೆ ಸೂಚನೆ ನೀಡಿದರು.

ಗೋಟೆಗಾಳಿ ಭೈರಾ ಗ್ರಾಮಸ್ಥರಿಗೆ ಹೆಸ್ಕಾಂ ಸಿಬ್ಬಂದಿ ವಿದ್ಯುತ್ ಸಮಸ್ಯೆಯಾದಾಗ ಸರಿಯಾಗಿ ಸ್ಪಂಧಿಸುತ್ತಿಲ್ಲ ಎಂಬ ದೂರುಬರುತ್ತಿದೆ. ಇದಕ್ಕಾಗಿ ಹೆಸ್ಕಾಂ ಎಇಇ ಅವರಿಗೆ ತರಾಟೆಗೆ ತೆಗೆದುಕೊಂಡು. ಆ ಭಾಗದಲ್ಲಿ ಸರಿಯಾದ ವ್ಯವಸ್ಥೆ ಕಲ್ಪಿಸಬೇಕು. ಕಂಬಗಳನ್ನು ಅಳವಡಿಸಬೇಕು ಎಂದು ಎಚ್ಚರಿಕೆ ನೀಡಿದರು. ಈ ಸಂದರ್ಭದಲ್ಲಿ ಡಿವೈಎಸ್ಪಿ, ತಹಶೀಲ್ದಾರರು, ಪೌರಾಯುಕ್ತರು, ತಾ.ಪಂ.ಇಒ, ಕಂದಾಯ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು