News Karnataka Kannada
Monday, April 29 2024
ಉತ್ತರಕನ್ನಡ

ಕಾರವಾರ: ನಗರಸಭೆಯ ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಬೆಂಕಿ

Fire breaks out at municipal corporation's solid waste disposal unit
Photo Credit : By Author

ಕಾರವಾರ: ತಾಲೂಕಿನ ಶಿರವಾಡದ ನಗರಸಭೆ ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಬುಧವಾರ ರಾತ್ರಿ ತಡರಾತ್ರಿ ಅಕಸ್ಮಿಕವಾಗಿ ಬೆಂಕಿ ತಗುಲಿದ್ದು ಗುರುವಾರವೂ ಬೆಂಕಿ ಆರಿಸುವ ಕಾರ್ಯಾಚರಣೆ ನಡೆಸಿದೆ. ನಗರಸಭೆ ಸಿಬ್ಬಂದಿ, ಅಗ್ನಿಶಾಮಕ ದಳದವರು ಬೆಂಕಿ ಆರಿಸಲು ಸತತ ಪ್ರಯತ್ನ ನಡೆಸುತ್ತಿದ್ದಾರೆ.

ಬೆಂಕಿಯಿಂದ ಪ್ಲಾಸ್ಟಿಕ್ ಸುಟ್ಟ ವಾಸನೆ, ವಿಪರೀತ ಹೊಗೆಯಿಂದ ಇಂಡಸ್ಟ್ರಿಯಲ್ ಏರಿಯಾ, ಕೋಣಮಕ್ಕಿ ಗ್ರಾಮಸ್ಥರಿಗೆ ಬಹಳ ತೊಂದರೆ ಉಂಟಾಗುತ್ತಿದೆ. ಘನತ್ಯಾಜ್ಯ ವಿಲೇವಾರಿ ಘಟಕವೇ ಬೇಡ ಎಂದು ಸ್ಥಳಿಯರು ಹಲವಾರು ಬಾರಿ ಪ್ರತಿಭಟನೆ ಸಹ ಮಾಡಿದ್ದರು. ಈ ಹಿಂದೆಯೂ 3-4 ಬಾರಿ ಈ ರೀತಿ ಬೆಂಕಿ ಅನಾಹುತ ಆಗಿತ್ತು.

ಕಸದ ರಾಶಿ ಇರೊದರಿಂದ ಬೆಂಕಿ ಹಿಡಿತಕ್ಕೆ ತೆಗೆದುಕೊಳ್ಳಲು ಸಾಧ್ಯವಾಗುತ್ತಿಲ್ಲ. ಟ್ಯಾಂಕರ್ ಮೂಲಕ ನೀರು ತಂದು ಅಗ್ನಿಶಾಮಕ ವಾಹನ ಗಳಿಗೆ ಪೂರೈಕೆ ಮಾಡಲಾಗುತ್ತಿದ್ದು ಎರಡು ವಾಹನಗಳು ಬೆಂಕಿ ಆರಿಸುವ ಕಾರ್ಯಾಚರಣೆ ಮಾಡುತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು