ಕಾರವಾರ: ಪೀಠೋಪಕರಣ ತಯಾರು ಮಾಡುವ ಮಳಿಗೆಯಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಮಳಿಗೆಯಲ್ಲಿದ್ದ ಕೋಟ್ಯಾಂತರ ರೂ. ಪೀಠೋಪಕರಣ ಭಸ್ಮವಾಗಿರುವ ಘಟನೆ ದಾಂಡೇಲಿ ನಗರದ ಅಂಬೇವಾಡಿಯಲ್ಲಿ ನಡೆದಿದೆ.
ಅಂಬೇವಾಡಿಯ ಕೈಗಾರಿಕಾ ವಸಾಹತು ಪ್ರದೇಶದಲ್ಲಿ ಶುಕ್ರವಾರ ಬೆಳಗ್ಗಿನ ಜಾವ ಅಗ್ನಿ ಅವಘಡ ನಡೆದಿದ್ದು, ಉದಯ ನಾಯ್ಕ ಎಂಬುವವರಿಗೆ ಸೇರಿದ್ದ ಪೀಠೋಪಕರಣ ತಯಾರಿಕಾ ಮಳಿಗೆ ಬೆಂಕಿಗಾಹುತಿಯಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಅಷ್ಟರಲ್ಲೇ ಬೆಂಕಿಯ ಕೆನ್ನಾಲಿಗೆಗೆ ಮಳಿಗೆಯಲ್ಲಿನ ಪೀಠೋಪಕರಣಗಳು ಸಂಪೂರ್ಣ ಸುಟ್ಟು ಕರಕಲಾಗಿದೆ.