News Karnataka Kannada
Saturday, May 04 2024
ಉತ್ತರಕನ್ನಡ

ಕಾರವಾರ: ಬೈಕ್ ಸವಾರರಿಗೆ ಡಿಕ್ಕಿ ಹೊಡೆದ ಮೀನು ಲಾರಿ

Karwar: Fish lorry collides with bikers
Photo Credit : By Author

ಕಾರವಾರ: ಭಟ್ಕಳ ತಾಲೂಕಿನ ಮುಟ್ಟಳ್ಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಮೀನು ಲಾರಿಯೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಮೃತಪಟ್ಟ ಘಟನೆ ನಡೆದಿದೆ.

ಲೋಕೇಶ ನಾಯ್ಕ ಮತ್ತು ಶೇಖರ ನಾಯ್ಕ ಮೃತರು. ಬೈಕ್ ಸವಾರರು ಭಟ್ಕಳದತ್ತ ಆಗಮಿಸುತ್ತಿದ್ದು ಈ ವೇಳೆ ಅತೀ ವೇಗವಾಗಿ ನಿರ್ಲಕ್ಷ್ಯತನದಿಂದ ಮೀನುಲಾರಿ ಚಲಾಯಿಸಿಕೊಂಡು ಬಂದ ಚಾಲಕ ರವಿ ಭೋವಿ ಬೈಕ್‌ಗೆ ಡಿಕ್ಕಿ ಹೊಡೆದಿದ್ದಾನೆ. ಅಲ್ಲದೇ ಲಾರಿ ನಿಯಂತ್ರಿಸಲಾಗದೇ ಮುಂದೆ ತೆರಳಿ ಪಲ್ಟಿಯಾಗಿ, ಲಾರಿ ಜಖಂಗೊಂಡಿದೆ.

ಅಪಘಾತದ ರಭಸಕ್ಕೆ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೋರ್ವ ಆಸ್ಪತ್ರೆಗೆ ದಾಖಲಿಸಲು ಉಡುಪಿಯತ್ತ ತೆರಳುತ್ತಿರುವಾಗ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾರೆ. ಲಾರಿ ಚಾಲಕನ ನಿರ್ಲಕ್ಷ್ಯತನದಿಂದಾಗಿ ಸಾವನ್ನಪ್ಪುವಂತಾಗಿದೆ. ರಾಷ್ಟ್ರೀಯ ಹೆದ್ದಾರಿಯ ಮುಟ್ಟಳ್ಳಿ ಬೈಪಾಸ್ ಬಳಿ ಪದೇ ಪದೇ ಈ ರೀತಿ ಅಪಘಾತಗಳು ಸಂಭವಿಸುತ್ತಿದ್ದು ಐಆರ್‌ಬಿ ಕಂಪೆನಿಯ ಅವೈಜ್ಞಾನಿಕ ಹೆದ್ದಾರಿ ಕಾಮಗಾರಿ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಮೀನು ಲಾರಿ ಚಾಲಕ ರವಿ ಭೋವಿ ವಿರುದ್ಧ ಭಟ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು