News Karnataka Kannada
Sunday, April 28 2024
ಉತ್ತರಕನ್ನಡ

ಕಾರವಾರ: ಕಾರಿಗೆ ಡಿಕ್ಕಿ ಹೊಡೆದ ಗ್ಯಾಸ್ ಟ್ಯಾಂಕರ್, ಐವರಿಗೆ ಗಾಯ

Karwar: Five injured as gas tanker collides with car
Photo Credit : News Kannada

ಕಾರವಾರ: ಗ್ಯಾಸ್ ಟ್ಯಾಂಕರ್ ವಾಹನವೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ 5 ಜನರು ಗಾಯಗೊಂಡ ಘಟನೆ ಅಂಕೋಲಾ ತಾಲೂಕಿನ ಬೆಳಸೆ ಬಳಿ ರಾ.ಹೆ. 66 ರಲ್ಲಿ ಸಂಭವಿಸಿದೆ.

ಹೊನ್ನಾವರ ತಾಲೂಕಿನ ಮಾಗೋಡ ಹಾಗೂ ಕವಲಕ್ಕಿ, ಹಡಿನಬಾಳ ಸಮೀಪದ ನಾತಗೇರಿ ನಿವಾಸಿಗಳು, ಅಂಕೋಲಾದ ಕನಸಿಗದ್ದೆಯಲ್ಲಿ ಮೃತಪಟ್ಟ ತಮ್ಮ ಕುಟುಂಬ ಸಂಬಂಧಿಯೋರ್ವರ ಅಂತಿಮ ದರ್ಶನ ಪಡೆದುಕೊಳ್ಳಲು ಕಾರಿನಲ್ಲಿ ಕುಮಟಾ ಕಡೆಯಿಂದ ಅಂಕೋಲಾ ಕಡೆ ಬರುತ್ತಿದ್ದಾಗ ದಾರಿಮಧ್ಯೆ ಬೆಳಸೆ ರೈಲ್ವೆ ಬ್ರಿಜ್ ಹತ್ತಿರ ಖಾಸಗಿ ಹೈಸ್ಕೂಲ್ ಎದುರಿನ ತಿರುವಿನ ಬಳಿ ಈ ಅಪಘಾತ ಸಂಭವಿಸಿದೆ. ಕಾರು ಚಾಲಕ ಆನಂದು ನಾಯ್ಕ, ಕಾರಿನಲ್ಲಿ ಪ್ರಮಾಣಿಸುತ್ತಿದ್ದ ಲಕ್ಷ್ಮೀ ಸುಬ್ರಾಯ ನಾಯ್ಕ, ರಾಜೇಶ ನಾಯ್ಕ, ಗಗನ ಆನಂದು ನಾಯ್ಕ ಮತ್ತು ಮನ್ವಿತ್ ಆನಂದು ನಾಯ್ಕ ಗಾಯಾಳುಗಳಾಗಿದ್ದಾರೆ.

ಅಂಕೋಲಾ ಕಡೆಯಿಂದ ಮಂಗಳೂರು ಕಡೆ ಸಾಗುತ್ತಿದ್ದ ಖಾಲಿ ಗ್ಯಾಸ್ ಟ್ಯಾಂಕರ್ ವಾಹನದ ಚಾಲಕ, ಅತಿ ವೇಗ ಮತ್ತು ಅಜಾಗರೂಕತೆಯಿಂದ ಟ್ಯಾಂಕರ್ ಚಲಾಯಿಸಿ ಬೇರೊಂದು ವಾಹನ ಓವರ್ ಟೇಕ್ ಮಾಡುವ ಭರದಲ್ಲಿ ಕಾರಿಗೆ ಡಿಕ್ಕಿ ಹೊಡೆದು ಅಪಘಾತ ಪಡಿಸಿದ ಎನ್ನಲಾಗಿದೆ. ಅದೃಷ್ಟವಶಾತ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದವರಿಗೆ ಚಿಕ್ಕ ಪುಟ್ಟ ಗಾಯಗಳಾಗಿದ್ದು, ಪ್ರಾಣಪಾಯದಿಂದ ಪಾರಾಗಿದ್ದಾರೆ.

ಗಾಯಾಳುಗಳನ್ನು ರಾಷ್ಟ್ರೀಯ ಹೆದ್ದಾರಿ ಸುರಕ್ಷತಾ ಅಂಬುಲೆನ್ಸ್ ವಾಹನದ ಮೂಲಕ ಅಂಕೋಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಂಕೋಲಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆದಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು