ಕಾರವಾರ: ಬಿಜೆಪಿ ಜಿಲ್ಲಾ ಮಾಜಿ ವಕ್ತಾರ, ಮುಖಂಡ ರಾಜೇಶ ನಾಯಕ ಅವರು ಹೃದಯಾಘಾತದಿಂದ ಶನಿವಾರ ಬೆಳಗ್ಗಿನ ಜಾವ ನಿಧನರಾದರು. ಕಳೆದ ಅನೇಕ ವರ್ಷಗಳಿಂದ ರಾಜೇಶ ನಾಯಕ ಬಿಜೆಪಿಯಲ್ಲಿದ್ದ ಪಕ್ಷ ಸಂಘಟನೆಗೆ ಶ್ರಮಿಸಿದ್ದಾರೆ.
ಶನಿವಾರ ಕುಮಟಾದ ಎ.ವಿ. ಬಾಳಿಗಾ ಕಾಲೇಜಿನಲ್ಲಿ ನಡೆಯುವ ಮತ ಎಣಿಕೆಯಲ್ಲಿ , ಮತ ಎಣಿಕಾ ಏಜೆಂಟ್ ಆಗಿ ಕಾರ್ಯ ನಿರ್ವಹಿಸಬೇಕಾಗಿತ್ತು. ಆದರೆ ಶನಿವಾರ ಬೆಳಗ್ಗೆ 3.30 ಕ್ಕೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಬಿಜೆಪಿಯ ಅನೇಕ ಮುಖಂಡರು ಸಂತಾಪ ಸೂಚಿಸಿದ್ದಾರೆ.