ಕಾರವಾರ: ಬಂದರು ಪ್ರದೇಶದಲ್ಲಿ ಹೂಳು ತೆರವು ಮಾಡಲು ಶಂಕು ಸ್ಥಾಪನೆ

ಕಾರವಾರ: ಬೈತಖೋಲ ಮೀನುಗಾರಿಕಾ ಬಂದರಿನ ಜಟ್ಟಿಯಲ್ಲಿ ತುಂಬಿಕೊಂಡಿದ್ದ ಹೂಳು ತೆರುವು ಮಾಡಲು ಕ್ರಮಕೈಗೊಳ್ಳಲಾಗಿದೆ. ಇದರಿಂದ ಮೀನುಗಾರರು ಅನುಭವಿಸುತ್ತಿದ್ದ ತೊಂದರೆ ಬಗೆಹರಿಯಲಿದೆ ಎಂದು ಶಾಸಕಿ ರೂಪಾಲಿ ನಾಯ್ಕ ಹೇಳಿದರು.

ಬೈತಖೋಲ ಮೀನುಗಾರಿಕೆ ಬಂದರಿನಲ್ಲಿ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಬೈತಖೋಲ ಮೀನುಗಾರಿಕೆ ಬಂದರಿನಲ್ಲಿರುವ ಮೀನುಗಾರಿಕೆ ಜಟ್ಟಿಯಲ್ಲಿ ಹೂಳು ತುಂಬಿಕೊಂಡಿದ್ದರಿಂದ ಬೋಟ್ನವರು ತುಂಬಾ ಸಮಸ್ಯೆ ಎದುರಿಸುತ್ತಿದ್ದರು. 3.50 ಕೋಟಿ ರೂ. ವೆಚ್ಚದಲ್ಲಿ ಹೂಳೆತ್ತುವ ಕಾಮಗಾರಿ ನಡೆಯಲಿದ್ದು, ಹೂಳಿನ ಸಮಸ್ಯೆ ನಿವಾರಣೆಯಾಗಲಿದೆ ಎಂದರು.

ಹೂಳೆತ್ತುವ ಕಾಮಗಾರಿಯೊಂದಿಗೆ ರ್ಯಾಂಪ್ ನಿರ್ಮಾಣ, ಮೀನುಗಾರಿಕೆ ಬಂದರಿನ ಸುತ್ತಮುತ್ತ ಮಳೆ ನೀರು ಹರಿದು ಹೋಗಲು ಚರಂಡಿ ನಿರ್ಮಾಣ, ಮೀನು ಒಣಗಿಸುವ ಪ್ಲಾಟ್ಫಾರ್ಮ್ ನಿರ್ಮಾಣ ಕಾಮಗಾರಿಯೂ ಇಲ್ಲಿ ನಡೆಯಲಿದೆ ಎಂದು ರೂಪಾಲಿ ತಿಳಿಸಿದರು. ಮೀನುಗಾರಿಕೆಗೆ ಸಂಬಂಧಿಸಂತೆ ಹಿಂದೆ ರಾಜ್ಯ ಸರ್ಕಾರ ಮತ್ತು ಮೀನುಗಾರಿಕೆಗೆ ಪ್ರತ್ಯೇಕ ಇಲಾಖೆ ಹೊಂದಿತ್ತು. ಆದರೆ, ಕೇಂದ್ರದಲ್ಲಿ ನರೇಂದ್ರ ಮೋದಿ ಅವರು ಆಡಳಿತಕ್ಕೆ ಬಂದ ನಂತರದಲ್ಲಿ ಮೀನುಗಾರಿಕೆಗೆ ಪ್ರತ್ಯೇಕ ಸಚಿವಾಲಯವನ್ನು ಆರಂಭಿಸುವ ಮೂಲಕ ಮೀನುಗಾರಿಕೆಗೆ ವಿಶೇಷ ಒತ್ತು ನೀಡಿದ್ದಾರೆ ಎಂದರು.

ಕೇಂದ್ರ ಮೀನುಗಾರಿಕೆ ಕಾರವಾರ ಮತ್ತು ಅಂಕೋಲಾಕ್ಕೆ ಆಗಮಿಸಿದ ಸಂದರ್ಭದಲ್ಲಿ ಕಾರವಾರದ ಮಾಜಾಳಿ ಮತ್ತು ಅಂಕೋಲಾದ ಬೆಳಾಂಬರ ಮೀನುಗಾರಿಕೆಗೆ ಬಂದರು ನಿರ್ಮಾಣಕ್ಕೆ ಇದ್ದ ಅಡೆತಡೆಗಳನ್ನು ನಿವಾರಿಸುವುದಾಗಿ ಹೇಳಿದ್ದಾರೆ ಎಂದು ಶಾಸಕರು ತಿಳಿಸಿದರು.

Gayathri SG

Recent Posts

“ಜೈಶ್ರೀರಾಮ್” ಹಾಡಿನಿಂದ ಕಾಲೇಜಿನಲ್ಲಿ ಧರ್ಮದಂಗಲ್: ಸಂಸದ ಪ್ರತಾಪ್​ ಸಿಂಹ ಖಂಡನೆ

ಧರ್ಮ ದಂಗಲ್​ ಕಿಡಿ ಮೈಸೂರಿನಲ್ಲಿ ಹೊತ್ತಿಕೊಂಡಿದ್ದು, ಮೈಸೂರಿನ ಸಂತ ಫಿಲೋಮಿನಾಸ್ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಹಾಡಿದ ಜಯತು ಜಯತು ಜೈ…

13 mins ago

ಭಾರತದಲ್ಲಿ ಹಿಂದುಗಳ ಸಂಖ್ಯೆ ಇಳಿಕೆ, ಮುಸ್ಲಿಮರ ಸಂಖ್ಯೆ ಏರಿಕೆ: ಆರ್ಥಿಕ ಸಲಹಾ ಮಂಡಳಿ

ಭಾರತದಲ್ಲಿ ಬಹುಸಂಖ್ಯಾತ ಹಿಂದೂಗಳ ಜನಸಂಖ್ಯೆ ಕುಸಿತವಾಗುತ್ತಿದ್ದು ಇದೇ ವೇಳೆ ಮುಸ್ಲಿಮರ ಸಂಖ್ಯೆ ಹೆಚ್ಚುತ್ತಿದೆ ಎಂದು ಪ್ರಧಾನ ಮಂತ್ರಿ ಆರ್ಥಿಕ ಸಲಹಾ…

31 mins ago

ಪಟಾಕಿ ತಯಾರಿಕಾ ಕಾರ್ಖಾನೆ ಸ್ಫೋಟ: 8 ಮಂದಿ ಮೃತ್ಯು

ಕಾರ್ಖಾನೆಯೊಂದರಲ್ಲಿ ಪಟಾಕಿ ಸಿಡಿದು 8 ಜನರು ಸಾವನ್ನಪ್ಪಿದ ಘಟನೆ ತಮಿಳುನಾಡಿನ ಶಿವಕಾಶಿಯಲ್ಲಿ ನಡೆದಿದೆ.

48 mins ago

ಹಾಸನ ವಿಡಿಯೋ ಪ್ರಕರಣ: ಸುಳ್ಳು ದೂರಿನ ಒತ್ತಡ

ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಸಂಸದ ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿದ್ದಾರೆ. ಶಾಸಕ ರೇವಣ್ಣ ಜೈಲು ಶಿಕ್ಷೆಗೆ ಗುರಿಗಾಗಿದ್ದಾರೆ. ಈ…

1 hour ago

ಮದುವೆ ರದ್ದು, ಕೋಪದಿಂದ ಅಪ್ರಾಪ್ತ ಬಾಲಕಿಯ ರುಂಡ ಕತ್ತರಿಸಿ ಕೊಲೆ ಮಾಡಿದ ಪ್ರೇಮಿ

ಮದುವೆ ಕ್ಯಾನ್ಸಲ್ ಆದ ಕೋಪಕ್ಕೆ ಬಾಲಕಿಯನ್ನು ಎಳೆದೊಯ್ದು ರುಂಡ ಕತ್ತರಿಸಿ ಕೊಲೆ ಮಾಡಿದ ಘಟನೆ ಕೊಡಗಿನ ಸೋಮವಾರಪೇಟೆಯ ಸುರ್ಲಬ್ಬಿಯಲ್ಲಿ ನಡೆದಿದೆ.

1 hour ago

ಅಕ್ಷಯ ತೃತೀಯದಂದು ಲಕ್ಷ್ಮಿ ಮತ್ತು ಕುಬೇರನಿಗೆ ವಿಶೇಷ ಪೂಜೆ

ಅಕ್ಷಯ ತೃತೀಯವನ್ನು ವೈಶಾಖ ಮಾಸದ ಶುಕ್ಲ ಪಕ್ಷದ ಮೂರನೇ ದಿನದಂದು ಈ ಹಬ್ಬವನ್ನು ಆಚರಿಸಲಾಗುತ್ತದೆ. ಅಂದಿನ ದಿನ ಭರವಸೆ, ಸಂತೋಷ,…

2 hours ago