News Karnataka Kannada
Tuesday, May 07 2024
ಉತ್ತರಕನ್ನಡ

ಕಾರವಾರ: ಚಂಡಿಕಾದೇವಿ ದೇವಾಲಯದ ಪುನರ್ ನಿರ್ಮಾಣದ ಅಡಿಗಲ್ಲು ಸಮಾರಂಭ

Karwar
Photo Credit : By Author

ಕಾರವಾರ: ಸಿದ್ದಾಪುರ ತಾಲ್ಲೂಕಿ‌ನ ಕರ್ಜಗಿ ಗ್ರಾಮದಲ್ಲಿ ನೆಲೆಸಿರುವ ಶ್ರೀ ಚಂಡಿಕಾದೇವಿ ದೇವಾಲಯದ ಪುನರ್ ನಿರ್ಮಾಣದ ಅಡಿಗಲ್ಲು ಸಮಾರಂಭ ನೆರವೇರಿಸಲಾಯಿತು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಮಿರ್ಜಾನ್ ಶಾಖಾ ಮಠದ ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಹಾಗೂ ವಿದ್ವಾನ್ ವಿಶ್ವನಾಥ ಭಟ್ ನೀರಗಾ‌ನ ಇವರು ಅಡಿಗಲ್ಲು ಸಮಾರಂಭವನ್ನು ಊರ ನಾಗರಿಕರ ಸಮ್ಮುಖದಲ್ಲಿ ನೆರವೇರಿಸಿದರು.

ಭಕ್ತರ ಸಕಲ ಇಷ್ಟಾರ್ಥಗಳನ್ನು ಈಡೇರಿಸುವ ಚೆಂಡಿಕಾ ದೇವಿಯೂ ಅಪಾರ ಭಕ್ತ ಸಮೂಹವನ್ನು ಹೊಂದಿದೆ.‌ ಶಕ್ತಿ ಪೀಠ ಎಂದೇ ಹೆಸರಾಗಿರುವ ಚೆಂಡಿಕಾ ದೇವಿ ಸನ್ನಿಧಾನವು ಹಲವು ಪವಾಡಗಳಿಗೂ ಕಾರಣವಾದ ಕ್ಷೇತ್ರ. ಜಿಲ್ಲೆ ಹಾಗೂ ಹೊರ ಜಿಲ್ಲೆ ರಾಜ್ಯಗಳ ಭಕ್ತರು ಚೆಂಡಿಕಾ ದೇವಿ ಸನ್ನಿದಾನಕ್ಕೆ ಬಂದು ಇಷ್ಟಾರ್ಥ ಸಿದ್ದಿಗಾಗಿ ಪೂಜೆ ಹರಕೆ ಸಲ್ಲಿಸುತ್ತಾರೆ.

ಆದರೆ ದೇವಿ ದೇವಾಲಯವೂ ಪುರಾತನವಾಗಿದ್ದು ಶಿಥಿಲಗೊಂಡಿದೆ. ಇದೇ ಕಾರಣಕ್ಕೆ ಆಡಳಿತ ಮಂಡಳಿಯೂ ದೇವಾಲಯದ ಪುನರ್ ಸ್ಥಾಪನೆಗೆ ತಿರ್ಮಾನಿಸಿದ ಕಾರಣ ಭಾನುವಾರ ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಹಾಗೂ ವಿದ್ವಾನ್ ವಿಶ್ವನಾಥ ಭಟ್ ನೀರಗಾ‌ನ ಇವರ ಸಮ್ಮುಖದಲ್ಲಿ ನೆರವೇರಿಸಲಾಯಿತು. ಈ ಶಕ್ತಿ ಕೇಂದ್ರದಲ್ಲಿ ಭವ್ಯ ದೇಗುಲ ನಿರ್ಮಾಣಕ್ಕೆ ಅಂದಾಜು ಖರ್ಚು ಸುಮಾರು 50 ಲಕ್ಷದಷ್ಟು ಬೇಕಾಗಬಹುದು ಎಂದು ಅಂದಾಜಿಸಲಾಗಿದೆ. ಕಟ್ಟಡ ನಿರ್ಮಾಣಕ್ಕೆ ಭಕ್ತರಿಂದ ತನು-ಮನ-ಧನದ ಸಹಕಾರ ನೀರಿಕ್ಷಿಸಲಾಗುತ್ತಿದೆ ಎಂದು ಆಡಳಿತ ಮಂಡಳಿ ತಿಳಿಸಿದೆ.

ಕಾರ್ಯಕ್ರಮದಲ್ಲಿ ಶಿರಸಿ ತಾಲೂಕಾ ಒಕ್ಕಲಿಗರ ಸಂಘದ ಅಧ್ಯಕ್ಷ ಅರುಣ್ ಗೌಡ ಮಳಲಿ, ಸೊರಬಾ ತಾಲೂಕಾ ಒಕ್ಕಲಿಗರ ಸಂಘದ ಅಧ್ಯಕ್ಷ ಉಮಾಕಾಂತ ನೆಲ್ಲೂರು, ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷ ಸುಧಾಕರ್ ಗೌಡ, ಸ್ಥಳೀಯರಾದ ಸುರೇಶ ಎಂ ಶೇಟ್, ಶ್ರೀಪತಿ ಹೆಗಡೆ, ಸುಬ್ರಾಯ ಗೌಡ, ಚಂದ್ರು ಗೌಡ, ದೇವೇಂದ್ರ ಗೌಡ, ಉಮಾಕಾಂತ ಗೌಡ, ಮಹಾಬಲೇಶ್ವರ ಗೌಡ ಸೇರಿದಂತೆ ಊರನಾಗರಿಕರು ಭಕ್ತರು ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು