ಕಾರವಾರ: ಹಳಿಯಾಳ ತಾಲೂಕಿನ ಬಿ.ಕೆ ಹಳ್ಳಿ ಗ್ರಾಮದ ಜನರಿಗೆ ನರೇಗಾ ಯೋಜನೆ ಅಡಿಯಲ್ಲಿ ನಿಯಮದಂತೆ ೧೦೦ ದಿನಗಳ ನಿರಂತರ ಕೆಲಸ ನೀಡಬೇಕು ಎಂದು ಒತ್ತಾಯಿಸಿ ಅಖಿಲ ಭಾರತ ರೈತ-ಕೃಷಿಕಾರ್ಮಿಕರ ಸಂಘಟನೆ (ಎ.ಐ.ಕೆ.ಕೆ.ಎಂ.ಎಸ್) ಜಿಪಂ ಸಿಇಓ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿತು.
ಸಂಘಟನೆಯ ಬಿ. ಕೆ. ಹಳ್ಳಿ ಗ್ರಾಮ ಘಟಕದ ಪದಾಧಿಕಾರಿಗಳು ಜಿಪಂ ಕಚೇರಿಗೆ ಆಗಮಿಸಿ ಕೆಲಕಾಲ ಪ್ರತಿಭಟನೆ ನಡೆಸಿ ಬೇಡಿಕೆ ಈಡೇರಿಕೆಗೆ ಆಗ್ರಹಿಸಿದರು. ಗ್ರಾಮೀಣ ಭಾಗದ ದುಡಿಯುವ ಬಡಜನರಿಗೆ ಅನೂಕೂಲವಾಗಲೆಂದು ಸರಕಾರವು ತಂದಿರುವ ನರೇಗಾ ಯೋಜನೆಯಲ್ಲಿ ಕೆಲಸ ಪಡೆಯಲು ಬಿ. ಕೆ. ಹಳ್ಳಿ ಗ್ರಾಮದ ಕೃಷಿ ಕೂಲಿಕಾರರು ಹರಸಾಹಸ ಪಡುತ್ತಿದ್ದಾರೆ.
ಗ್ರಾಮಸ್ಥರು ಗ್ರಾಮ ಪಂಚಾಯತಿಗೆ ಹಾಗೂ ತಾಲೂಕ ಪಂಚಾಯತಿಗೆ ನಿರಂತರವಾಗಿ ಕೆಲಸ ನೀಡುವಂತೆ ಹಲವು ಬಾರಿ ಕೇಳಿದರೂ ನಿರಂತರವಾಗಿ ನರೇಗಾ ಕೆಲಸ ನೀಡಿಲ್ಲ. ಕೆಲವು ದಿನಗಳು ಕೆಲಸ ನೀಡಿ, ಪಾರ್ ನಂ ೬ ತುಂಬಿದರೂ ಎನ್.ಎಮ್.ಆರ್. ತಗೆಯುವಲ್ಲಿ ವಿಳಂಬ ಮಾಡುತ್ತಾರೆ. ಆರ್ಥಿಕ ಸಂಕಷ್ಟವನ್ನು ನೀಗಿಸಲು, ಕುಟುಂಬದ ಜೀವನೋಪಾಯಕ್ಕಾಗಿ ಅನಿವಾರ್ಯವಾಗಿ ಗ್ರಾಮದ ಜನರು ಪಟ್ಟಣದ ದಾರಿ ಹಿಡಿಯುವಂತಾಗಿದೆ. ಆದ್ದರಿಂದ ಈ ನಿರಂತರವಾಗಿ ಗ್ರಾಮದ ಜನರಿಗೆ ಕೆಲಸ ನೀಡಬೇಕು ಎಂದು ಆಗ್ರಹಿಸಿದರು.
ಬಳಿಕ ತಮ್ಮ ಬೇಡಿಕೆಗಳ ಕುರಿತ ಮನವಿಯನ್ನು ಜಿಪಂ ಸಿಇಓ ಅವರಿಗೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಗ್ರಾಮೀಣ ಘಟಕದ ಸಂಚಾಲಕಿ ರೂಪಾ ಮೇತ್ರಿ, ಪದಾಧಿಕಾರಿಗಳಾದ ರೇಣುಕಾ ಗಾಡೇಕರ, ಶಂಕರ ಪೇಚಕಿ, ಅಂಬವ್ವ ಮೇತ್ರಿ, ದಾಮೋದರ ಮೇತ್ರಿ, ರಾಮು ಬರ್ಗುಂಡಿ, ಕುಮಾರ ತವರಿ ಮುಂತಾದವರಿದ್ದರು.
ನಗರದ ಸರಸ್ವತಿ ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಂಘದಿಂದ ಶನಿವಾರ ಗುರುವಂದನಾ ಹಾಗೂ ಹಳೆಯ ವಿದ್ಯಾರ್ಥಿಗಳ ಸ್ನೇಹ ಮಿಲನ ಕಾರ್ಯಕ್ರಮವನ್ನು ಬಹಳ…
ತಮಿಳು ಚಿತ್ರರಂಗದ ಜನಪ್ರಿಯ ನಟ ಸಿಂಭು ಅವರ ವಿರುದ್ಧ ಇದೀಗ ನಿರ್ದೇಶಕ ದೂರು ನೀಡಿದ್ದು ತಮಿಳು ಚಿತ್ರರಂಗದಿಂದ ಹೊರಗಟ್ಟಬೇಕು ಎಂದು…
ಹಲವಾರು ಕಾರಣಗಳಿಗಾಗಿ ಕೆಲಸದ ಸ್ಥಳದಲ್ಲಿ ಅತಿಯಾದ ಒತ್ತಡವುಂಟಾಗುತ್ತದೆ. ಇದರಿಂದ ಆಯಾಸ ಹಾಗೂ ವಿಶ್ರಾಂತಿಯ ಕೊರತೆ ತಲೆದೋರುತ್ತದೆ. ಇದರಿಂದ ವ್ಯಕ್ತಿ ಸಿಕ್ಕಾಪಟ್ಟೆ…
ರಾಜ್ಯದ ಕೆಲವಡೆ ಬಾರಿ ಮಳೆಯಾಗುವ ಸಾಧ್ಯತೆ ಇರುವ ಕಾರಣ ಹವಮಾನ ಇಲಾಖೆ 8 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್, 23 ಜಿಲ್ಲೆಗಳಿಗೆ…
ತಾಯಂದಿರ ದಿನ , ತಾಯಂದಿರ ಗೌರವಾರ್ಥ ರಜಾದಿನವನ್ನು ವಿಶ್ವದಾದ್ಯಂತ ದೇಶಗಳಲ್ಲಿ ಆಚರಿಸಲಾಗುತ್ತದೆ. ಅದರ ಆಧುನಿಕ ರೂಪದಲ್ಲಿ ರಜಾದಿನವು ಹುಟ್ಟಿಕೊಂಡಿತುಯುನೈಟೆಡ್ ಸ್ಟೇಟ್ಸ್…
ವಾರದ ಆರಂಭದಲ್ಲೇ ಶುಭ ಸುದ್ದಿ. ಮನೆಯಲ್ಲಿ ಕಾರ್ಯಕ್ರಮಗಳು ನಡೆಯಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದ್ದು, ವಾರಾಂತ್ಯದಲ್ಲಿ ಎಲ್ಲವೂ ಸರಿದೂಗಲಿದೆ. ಕಾರ್ಮಿಕರಿಗೆ ಲಾಭ.…