News Karnataka Kannada
Sunday, May 12 2024
ಉತ್ತರಕನ್ನಡ

ಕಾರವಾರ: ಅನಧಿಕೃತ ಮರಳು ಉಪಯೋಗಿಸಿ ಸರಕಾರಿ ಕಾಮಗಾರಿ

Karwar: Government works using unauthorized sand
Photo Credit : By Author

ಕಾರವಾರ: ಅನಧಿಕೃತ ಮರಳನ್ನು ಉಪಯೋಗಿಸಿ ಸರಕಾರಿ ಕಾಮಗಾರಿಗಳು ನಿರಂತರ ನಡೆಯುತ್ತಿವೆ ಎಂದು ಉತ್ತರ ಕನ್ನಡ ಜಿಲ್ಲಾ ಮರಳು ಕಾರ್ಮಿಕರ ಸಂಘ ಆರೋಪಿಸಿದ್ದು ಅಧಿಕೃತ ಮರಳುಗಾರಿಕೆ ಆರಂಭಿಸಲು ಕ್ರಮ ವಹಿಸುವಂತೆ ಆಗ್ರಹಿಸಿದ್ದಾರೆ.

ಈ ಬಗ್ಗೆ ಶನಿವಾರ ಜಿಲ್ಲಾಡಳಿತಕ್ಕೆ ಲಿಖಿತ ಮನವಿ ಸಲ್ಲಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂಘದ ಪದಾಧಿಕಾರಿಗಳು ಉತ್ತರ ಕನ್ನಡ ಜಿಲ್ಲೆಯಲ್ಲಿ ಸಾಂಪ್ರದಾಯಿಕ ಮರಳುಗಾರಿಕೆಯನ್ನು ಹಸಿರು ಪೀಠದ ಆದೇಶದಂತೆ ಮೇ.5ರಿಂದ ಸ್ಥಗಿತಗೊಳಿಸಲಾಗಿದೆ. ಆದರೆ ಕಳೆದ 6 ತಿಂಗಳಿಂದ ಮರಳುಗಾರಿಕೆ ನಿಷೇಧದ ನಡುವೆಯು ರಾಜ್ಯ ಮತ್ತು ಕೇಂದ್ರ ಸರಕಾರದ ಅನುದಾನದ ಸಾವಿರಾರು ಕೋಟಿ ರೂಪಾಯಿಗಳ ಅಭಿವೃದ್ಧಿ ಕಾಮಗಾರಿಗಳು ನಿರಂತರವಾಗಿ ಅನಧಿಕೃತ ಮರಳನ್ನು ಒಳಗೊಂಡು ನಡೆಯುತ್ತಿದೆ.

ಇದು ಹಸಿರು ಪೀಠದ ಆದೇಶದ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಆರೋಪಿಸಿದರು. ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮರಳು ಅತೀ ಅವಶ್ಯಕವಾಗಿದೆ. ಅಲ್ಲದೇ ನದಿಯಲ್ಲಿ ಸಂಗ್ರಹವಾಗುವ ಮರಳನ್ನು ತೆಗೆಯುವುದು ಅವಶ್ಯಕವಾಗಿದ್ದು ಇದರಿಂದ ನೆರೆ, ಪ್ರವಾಹಗಳನ್ನು ತಪ್ಪಿಸಲು ಸಾಧ್ಯವಾಗುತ್ತದೆ. ಹೀಗಾಗಿ ಸರಕಾರವು ಈ ಕುರಿತು ಶೀಘ್ರವಾಗಿ ಕ್ರಮವಹಿಸಿ ಅಧಿಕೃತ ಮರಳುಗಾರಿಕೆ ಪ್ರಾರಂಭಿಸಬೇಕು ಎಂದು ಆಗ್ರಹಿಸಿದ್ದಾರೆ.

ಈ ಸಂದರ್ಭದಲ್ಲಿ ಸಂಘದ ಗೋವಿಂದ ನಾಯ್ಕ ಹೊನ್ನಾವರ ಸೇರಿದಂತೆ ಹಲವರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು