ಕಾರವಾರ: ಅಂತರರಾಷ್ಟ್ರೀಯ ಕಡಲತೀರ ಸ್ವಚ್ಚತಾ ದಿನದ ಅಂಗವಾಗಿ ಕಾರವಾರ ನಗರದ ರವೀಂದ್ರನಾಥ ಟ್ಯಾಗೋರ್ ಕಡಲತೀರದಲ್ಲಿ ಹಮ್ಮಿಕೊಂಡಿದ್ದ ಸ್ವಚ್ಚತಾ ಕಾರ್ಯಕ್ಕೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಸಮುದ್ರ ಪೂಜೆ ನಡೆಸುವ ಮೂಲಕ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಟ್ಯಾಗೋರ್ ತೀರಕ್ಕೆ ಅವರನ್ನು ಜಿಲ್ಲಾ ಪೊಲೀಸ್ ಬ್ಯಾಂಡ್ ಸ್ವಾಗತಿಸಿಕೊಂಡಿತು. ಬಳಿಕ ತೀರದಲ್ಲಿ ಸಮುದ್ರ ದೇವನಿಗೆ ಪೂಜೆ ಸಲ್ಲಿಸಿದರು. ಬಳಿಕ ಸ್ವಚ್ಚತಾ ಸಲಕರಣೆಗಳನ್ನ ಸಂಘ- ಸಂಸ್ಥೆಗಳ ಪದಾಧಿಕಾರಿಗಳಿಗೆ ಹಸ್ತಾಂತರಿಸಿ ಸ್ವಚ್ಚತಾ ಕಾರ್ಯಕ್ಕೆ ಚಾಲನೆ ನೀಡಿದರು.
ಮಯೂರವರ್ಮ ವೇದಿಕೆಯ ಬದಿಯಲ್ಲಿ ಗಿಡ ನೆಟ್ಟು, ನೀರೆರೆದರು. ಬಳಿಕ ನಾಲ್ಕು ಕಿ.ಮೀ. ಟ್ಯಾಗೋರ್ ಕಡಲತೀರದಲ್ಲಿ ಸುಮಾರು 5 ಸಾವಿರ ಮಂದಿಯಿಂದ ಸ್ವಚ್ಚತಾ ಕಾರ್ಯ ನಡೆಸಲಾಯಿತು.
ಈ ಸಂದರ್ಭದಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕಿ ರೂಪಾಲಿ ನಾಯ್ಕ, ಜಿಲ್ಲಾಧಿಕಾರಿ, ಸಿಇಒ ಸೇರಿದಂತೆ ತಾಲೂಕಿನ ವಿವಿಧ ಶಾಲಾ ಕಾಲೇಜಿನ ಸಾವಿರಾರು ವಿದ್ಯಾರ್ಥಿಗಳು ಕಡಲತೀರದ ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.