ಕಾರವಾರ: ಅಂತರರಾಷ್ಟ್ರೀಯ ಕಡಲತೀರ ಸ್ವಚ್ಚತಾ ದಿನದ ಅಂಗವಾಗಿ ಕಾರವಾರ ನಗರದ ರವೀಂದ್ರನಾಥ ಟ್ಯಾಗೋರ್ ಕಡಲತೀರದಲ್ಲಿ ಹಮ್ಮಿಕೊಂಡಿದ್ದ ಸ್ವಚ್ಚತಾ ಕಾರ್ಯಕ್ಕೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಸಮುದ್ರ ಪೂಜೆ ನಡೆಸುವ ಮೂಲಕ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಟ್ಯಾಗೋರ್ ತೀರಕ್ಕೆ ಅವರನ್ನು ಜಿಲ್ಲಾ ಪೊಲೀಸ್ ಬ್ಯಾಂಡ್ ಸ್ವಾಗತಿಸಿಕೊಂಡಿತು. ಬಳಿಕ ತೀರದಲ್ಲಿ ಸಮುದ್ರ ದೇವನಿಗೆ ಪೂಜೆ ಸಲ್ಲಿಸಿದರು. ಬಳಿಕ ಸ್ವಚ್ಚತಾ ಸಲಕರಣೆಗಳನ್ನ ಸಂಘ- ಸಂಸ್ಥೆಗಳ ಪದಾಧಿಕಾರಿಗಳಿಗೆ ಹಸ್ತಾಂತರಿಸಿ ಸ್ವಚ್ಚತಾ ಕಾರ್ಯಕ್ಕೆ ಚಾಲನೆ ನೀಡಿದರು.
ಮಯೂರವರ್ಮ ವೇದಿಕೆಯ ಬದಿಯಲ್ಲಿ ಗಿಡ ನೆಟ್ಟು, ನೀರೆರೆದರು. ಬಳಿಕ ನಾಲ್ಕು ಕಿ.ಮೀ. ಟ್ಯಾಗೋರ್ ಕಡಲತೀರದಲ್ಲಿ ಸುಮಾರು 5 ಸಾವಿರ ಮಂದಿಯಿಂದ ಸ್ವಚ್ಚತಾ ಕಾರ್ಯ ನಡೆಸಲಾಯಿತು.
ಈ ಸಂದರ್ಭದಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕಿ ರೂಪಾಲಿ ನಾಯ್ಕ, ಜಿಲ್ಲಾಧಿಕಾರಿ, ಸಿಇಒ ಸೇರಿದಂತೆ ತಾಲೂಕಿನ ವಿವಿಧ ಶಾಲಾ ಕಾಲೇಜಿನ ಸಾವಿರಾರು ವಿದ್ಯಾರ್ಥಿಗಳು ಕಡಲತೀರದ ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ನನ್ನ ಮಗ ಗಿರೀಶ್ ತಪ್ಪು ಮಾಡಿದ್ದಾನೆ. ಅವನಿಗೆ ಕೋರ್ಟ್ ಯಾವ ಶಿಕ್ಷೆ ಬೇಕಾದರು ಕೊಡಲಿ. ಅಂಜಲಿ ಮತ್ತು ಗಿರೀಶ್ ಪರಸ್ಪರ…
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ಅವರು ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ನಡೆಸಿದ…
ಅತಿ ವೇಗವಾಗಿ ಬಂದ ಕಾರೊಂದು ಭಯಾನಕವಾಗಿ ಇನ್ನೊಂದು ಕಾರಿಗೆ ಡಿಕ್ಕಿಯಾಗಿ ಮತ್ತೆ ಮರಕ್ಕೆ ರಭಸದಿಂದ ಗುದ್ದಿದ್ದರಿಂದ ನಾಲ್ವರು ಕಾನೂನು ವಿದ್ಯಾರ್ಥಿಗಳು…
ಪಟ್ಟಣದಲ್ಲಿ ಮೂಲಸೌಕರ್ಯಗಳ ಕೊರತೆ ಎದ್ದು ಕಾಣುತ್ತಿದೆ. ಸ್ಥಳೀಯ ಆಡಳಿತದ ಕಾರ್ಯವೈಖರಿ ಬಗ್ಗೆ ಸಾರ್ವಜನಿಕರು ಬೇಸರಗೊಂಡಿದ್ದಾರೆ. ಪಟ್ಟಣದಲ್ಲಿ ಒಟ್ಟು 27 ವಾರ್ಡ್ಗಳು…
ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಮೇ.19 ರಂದು ಭಾನುವಾರ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ ಸಾಯಿಬಾಬಾ…
ಗಡಿಜಿಲ್ಲೆ ವರುಣಾರ್ಭಟ ಮುಂದುವರೆದಿದ್ದು ಶನಿವಾರ ಮಧ್ಯಾಹ್ನದ ಜಿಲ್ಲಾಕೇಂದ್ರದಲ್ಲಿ ಒಂದೂವರೆ ತಾಸು ಜೋರು ಮಳೆಯಾಯಿತು.