ಕಾರವಾರ: ಪರಮಪೂಜ್ಯ ಜಗದ್ಗುರು ವೇದಾಂತಾಚಾರ್ಯ ಮಂಜುನಾಥ ಭಾರತಿ ಸ್ವಾಮೀಜಿಗಳ ಸಾನಿಧ್ಯದಲ್ಲಿ ಯಲ್ಲಾಪುರದ ಮರಾಠ ಸಮುದಾಯದ ಗುರುವಂದನಾ ಕಾರ್ಯಕ್ರಮದಲ್ಲಿ ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಅವರು ಪಾಲ್ಗೊಂಡು, ಪರಮಪೂಜ್ಯ ಸ್ವಾಮೀಜಿಗಳ ಆಶೀರ್ವಾದವನ್ನು ಪಡೆದರು.
ಈ ವೇಳೆ ಮಾತನಾಡಿದ ಸಚಿವರು, ಅತ್ಯಂತ ಹಿಂದುಳಿದ ಮರಾಠ ಸಮುದಾಯದ ಅಭಿವೃದ್ಧಿಗಾಗಿ ನಮ್ಮ ಸರಕಾರ ಮರಾಠ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ ಹಲವಾರು ಯೋಜನೆ ಜಾರಿಗೊಳಿಸಿದೆ ಹಾಗೂ ಕುಳವಾಡಿ ಮರಾಠಿ ಸಮುದಾಯವು ಜಾತಿ ಪ್ರಮಾಣ ಪತ್ರ ಪಡೆಯುವುದಕ್ಕೆ ಉಂಟಾಗಿರುವ ತಾಂತ್ರಿಕ ಸಮಸ್ಯೆಯನ್ನು ಶೀಘ್ರದಲ್ಲೇ ನಿವಾರಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ವಿಧಾನಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ, ಮರಾಠ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎಮ್.ಜಿ.ಮುಳೆ, ಜಿಲ್ಲಾ ಪಂಚಾಯತ ಮಾಜಿ ಸದಸ್ಯರಾದ ಎಲ್.ಟಿ.ಪಾಟೀಲ್, ಪ್ರಮುಖರಾದ ರಾಮು ನಾಯ್ಕ, ರವಿ ಕೈಟಕರ್, ಬಾಲಕೃಷ್ಣ ನಾಯಕ ಸೇರಿದಂತೆ ಮರಾಠ ಸಮುದಾಯದ ಪ್ರಮುಖರು ಇದ್ದರು.