ಕಾರವಾರ: ಕಳೆದ ಕೆಲವು ದಿನಗಳಿಂದ ರಸ್ತೆ ಅಪಘಾತಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚು ಹೆಚ್ಚುವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಸಂಚಾರಿ ಪೊಲೀಸ್ ಠಾಣೆಯ ಅಧಿಕಾರಿಗಳಿಂದ ನನ್ನನ್ನು ಕ್ಷಮಿಸಿ ವಿನೂತನ ಹೆಲ್ಮೆಟ್ ಜಾಗೃತಿ ಅಭಿಯಾನ ಕಾರವಾರ ನಗರದಲ್ಲಿ ಆರಂಭಿಸಿದೆ.
ರಸ್ತೆ ಅಪಘಾತಗಳಲ್ಲಿ ಸಾರ್ವಜನಿಕರು ಅಪಾರ ಸಾವು-ನೋವುಗಳಿಗೆ ತುತ್ತಾಗುತ್ತಿರುವುದು ಅತ್ಯಂತ ಖೇದಕರ ಸಂಗತಿ, ಅಂಕಿ ಸಂಖ್ಯೆಗಳನ್ನು ಗಮನಿಸಿದರೆ ಅವುಗಳಲ್ಲಿ ವಾಹನ ಚಲಾಯಿಸುವಾಗ ಹೆಲ್ಮೆಟ್ ಧರಿಸದೆ ಅಪಘಾತಗಳಲ್ಲಿ ಗಂಭೀರ ಗಾಯವಾಗಿ ಸಾವಾಗುತ್ತಿರುವುದು ಹೆಚ್ಚಾಗಿದೆ. ರಸ್ತೆ ಅಪಘಾತಗಳ ಸಂಖ್ಯೆಯನ್ನು ಕ್ಷಿಣಗೊಳಿಸಲು ಹಾಗೂ ವಾಹನ ಸವಾರರಿಗೆ ರಸ್ತೆ ಅಪಘಾತಗಳ ಬಗ್ಗೆ ಜಾಗೃತಿ ಮೂಡಿಸಲು ಅಪರಾಧ ತಡೆ ಮಾಸಾಚರಣೆಯ ಅಂಗವಾಗಿ ಇಂದು ಕಾರವಾರ ನಗರ ಸಂಚಾರ ಪೊಲೀಸ್ ಠಾಣೆಯ ವತಿಯಿಂದ ನಗರದ ಸುಭಾಷ ವೃತ್ತ,ಅಂಬೇಡ್ಕರ್ ವೃತ್ತ,ಶಿವಾಜಿ ವೃತ್ತ,ಹೂವಿನ ಚೌಕ್,ಪಿಕಳೆ ರಸ್ತೆ,ಸೇರಿದಂತೆ ವಿವಿಧ ವೃತ್ತಗಳಲ್ಲಿ ” ನನ್ನನ್ನು ಕ್ಷಮಿಸಿ” ಎಂಬ ಹೆಲ್ಮೆಟ್ ಜಾಗೃತಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು,
ಹೆಲ್ಮೆಟ್ ಧರಿಸದೆ ವಾಹನ ಚಲಾಯಿಸುವ ಸವಾರರ ಕೈಗೆ ” ವಾಹನ ಚಲಾಯಿಸುವಾಗ ಹೆಲ್ಮೆಟ್ ಧರಿಸದೆ ಸಂಚಾರ ನಿಯಮವನ್ನು ಉಲ್ಲಂಘಿಸಿದ್ದೆನೆ,ನನ್ನ ಜೀವ ಸುರಕ್ಷತೆಯ ಹಿತದೃಷ್ಟಿಯಿಂದ ನಾನು ಕಡ್ಡಾಯವಾಗಿ ಹೆಲ್ಮೆಟ್ ಧರಿಸುತ್ತೆನೆ,ದಯವಿಟ್ಟು ” ನನ್ನನ್ನು ಕ್ಷಮಿಸಿ” ಎಂಬ ಶಿರ್ಷಿಕೆಯುಳ್ಳ ಭಿತ್ತಿಫಲಕ ನೀಡಿ ಸಾರ್ವಜನಿಕರಿಗೆ ವಿನೂತನವಾಗಿ ಜಾಗೃತಿಯನ್ನು ಮೂಡಿಸಲಾಯಿತು.
ಅಭಿಯಾನದಲ್ಲಿ ಕಾರವಾರ ನಗರ ಸಂಚಾರ ಠಾಣೆಯ ಪಿಎಸ್ಐ ನಾಗಪ್ಪ.ಬಿ. ಹಾಗೂ ಸಿಬ್ಬಂದಿಗಳಾದ ಗಣಪತಿ ಬೆನಕಟ್ಟಿ, ಮೌಲಾಲಿ,ಗದಿಗೆಪ್ಪ ಚಕ್ರಸಾಲಿ,ನಾಗರಾಜ ಹರಪನಹಳ್ಳಿ,ಪ್ರವೀಣ ಇತರರು ಭಾಗವಹಿಸಿದ್ದರು.