ಉತ್ತರಕನ್ನಡ

ಕಾರವಾರ: ಬೈತಖೋಲ ಗುಡ್ಡದಲ್ಲಿ ರಸ್ತೆ ನಿರ್ಮಾಣಕ್ಕೆ ತಡೆಯಾಜ್ಞೆ ಮುಂದುವರಿಸಿದ ಹೈಕೋರ್ಟ್

ಕಾರವಾರ: ಸ್ಥಳೀಯರಿಗೆ ಸಮಸ್ಯೆ ಉಂಟಾಗುವ ರೀತಿಯಲ್ಲಿ ಇಲ್ಲಿನ ಬೈತಖೋಲ ಗುಡ್ಡದಲ್ಲಿ ನೌಕಾನೆಲೆಯವರು ಆರಂಭಿಸಿದ್ದ ರಸ್ತೆ ಕಾಮಗಾರಿಗೆ ಮಾ.23 ರಂದು ನೀಡಿದ್ದ ತಡೆಯಾಜ್ಞೆಯ ಆದೇಶವನ್ನು ಹೈಕೋರ್ಟ್ ಮುಂದಿನ ಅವಧಿಗೆ ವಿಸ್ತರಿಸಿದೆ.

ಈ ಬಗ್ಗೆ ಬೈತಖೋಲ ಅಲಿಗದ್ದಾ ನಿವಾಸಿತರ ಸಂಘದ ಅಧ್ಯಕ್ಷರು ಮಾಹಿತಿ ನೀಡಿದ್ದಾರೆ. ಸೀಬರ್ಡ್ ನೌಕಾನೆಲೆಯವರು ಬೈತಖೋಲದ ಶ್ರೀ ಭೂದೇವಿ ಗುಡ್ಡದಲ್ಲಿ ರಸ್ತೆ ನಿರ್ಮಾಣ ಕಾಮಗಾರಿಯನ್ನು ನವೆಂಬರ್ 2021 ರಲ್ಲಿ ಪ್ರಾರಂಭ ಮಾಡಿದ ಸಂದರ್ಭದಲ್ಲಿ ಈ ರಸ್ತೆ ಕಾಮಗಾರಿಯಿಂದ ಸಂಭವಿಸುವ ಪ್ರಕೃತಿ ವಿಕೋಪ ಮತ್ತು ಭೂಕುಸಿತದಿಂದ ಗುಡ್ಡದ ತಪ್ಪಲ್ಲಿನಲ್ಲಿ ನೆಲಸಿರುವ ಸುಮಾರು 500 ಕ್ಕೂ ಹೆಚ್ಚು ಕುಟುಂಬಗಳಿಗೆ ಆಗುವ ಜೀವಹಾನಿ ಬಗ್ಗೆ ಸೀಬರ್ಡ್ ಅಧಿಕಾರಿಗಳಿಗೆ ಮತ್ತು ಜಿಲ್ಲಾಡಳಿತಕ್ಕೆ ಮನವರಿಕೆ ಮಾಡಿ ಕೊಟ್ಟಿದ್ದರು.

ಡಿಸೆಂಬರ್-2022 ರಲ್ಲಿ ಮತ್ತೆ ರಸ್ತೆ ಕಾಮಗಾರಿಯನ್ನು ಸೀಬರ್ಡ್ ಅಧಿಕಾರಿಗಳು ಆರಂಭಿಸಲು ಪ್ರಯತ್ನಿಸಿದಾಗ ಬೈತಖೋಲ ನಿವಾಸಿತರು ಪುನಃ ಸೀಬರ್ಡ್ ಅಧಿಕಾರಿಗಳಿಗೆ ಮತ್ತು ಜಿಲ್ಲಾಡಳಿತಕ್ಕೆ ಮನವಿ ಮುಖಾಂತರ ಪ್ರತಿಭಟನೆ ನಡೆಸಿದ್ದರು. ಕಾನೂನು ಹೋರಾಟಕ್ಕಿಳಿದಿದ್ದ ಸ್ಥಳಿಯರು ಮಾ.20 ರಂದು ರಂದು ಕರ್ನಾಟಕ ಉಚ್ಚ ನ್ಯಾಯಾಲಯದ ಧಾರವಾಡ ಪೀಠದಲ್ಲಿ ರೀಟ್ ಅರ್ಜಿಯ ಮುಖಾಂತರ ದಾವೆಯನ್ನು ಹೂಡಿದ್ದರು.

Ashika S

Recent Posts

‘ಜಂಟಿ ಸರ್ವೆ ಆಗುವ ತನಕ ಹಿರೀಕಾಟಿಯಲ್ಲಿ ಗಣಿಗಾರಿಕೆ ಸ್ಥಗಿತಗೊಳಿಸದಿದ್ದರೆ ಉಗ್ರ ಹೋರಾಟ’

ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಹಿರೀಕಾಟಿ ಗ್ರಾಮದ ಸರ್ವೆ ನಂ. 108 ರಲ್ಲಿ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟಪಂಗಡದವರಿಗೆ ಸೇರಿದ 2 ಎಕರೆ…

56 seconds ago

ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಸಿಬ್ಬಂದಿ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪ್ರಥಮ ದರ್ಜೆ ಸಹಾಯಕ ವಿಜಯ್ ಕುಮಾರ್ ಕೆಲಸದ ವಿಚಾರವಾಗಿ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

8 mins ago

ದುರಸ್ತಿ ಮಾಡಿ ವಾರ ಕಳೆಯುವ ಮೊದಲೇ ಕಿತ್ತು ಬಂದ ರಸ್ತೆ

ಪಟ್ಟಣದ ಬಸವಕಲ್ಯಾಣ-ಭಾಲ್ಕಿ ಮುಖ್ಯ ರಸ್ತೆ ಸಂಪೂರ್ಣ ಕೆಟ್ಟು ಹೋಗಿದೆ. ವಾರದ ಹಿಂದೆ ರಸ್ತೆ ದುರಸ್ತಿ ಕಾಮಗಾರಿ ಮಾಡಲಾಗಿದ್ದು, ವಾರ ಕಳೆಯುವ…

15 mins ago

ಬಿರುಗಾಳಿ ಸಹಿತ ಮಳೆಗೆ ಕಬ್ಬಿಣದ ಬಸವ ಮಹಾದ್ವಾರ ಕುಸಿತ

ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…

27 mins ago

ನೂರಕ್ಕೆ ನೂರು ‘ಇಂಡಿಯಾ’ ಮೈತ್ರಿಗೆ ಅಧಿಕಾರ: ಈಶ್ವರ ಖಂಡ್ರೆ

'ದೇಶದಲ್ಲಿ ಈ ಸಲ 'ಇಂಡಿಯಾ' ಒಕ್ಕೂಟ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ' ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ…

32 mins ago

ನಾನು ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದ ವಿರಾಟ್​​ ಕೊಹ್ಲಿ

ವಿರಾಟ್​​ ಕೊಹ್ಲಿ ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದು ಹೇಳಿದ್ದಾರೆ. ಅವರು ಹೇಳಿರುವ ಆಡಿಯೋ ಸಮೇತ ದೃಶ್ಯ ವೈರಲ್​ ಆಗಿದೆ. 

46 mins ago