ಕಾರವಾರ: ಕೈತೋಟವನ್ನು ಸಮೃದ್ಧವಾಗಿ ಅಭಿವೃದ್ದಿ ಪಡಿಸಲು ಹೆಚ್ಚಿನ ಗುರಿಯನ್ನು ರೂಪಿಸಿಕೊಳ್ಳುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪಿ. ಹೇಮಲತ ಅವರು ಹೇಳಿದರು.
ನಗರದ ಜಿಪಂ ಸಭಾಂಗಣದಲ್ಲಿ ಶನಿವಾರ ನಡೆದ ಮಾಸಿಕ ಕೆಡಿಪಿ ಹಾಗೂ ಸಾಮಾನ್ಯ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಆಯಾ ಇಲಾಖೆಗಳ ಹೊಸ ಯೋಜನೆಗಳ ಬೇಡಿಕೆಗಳನ್ನು ಅದರ ಮಾರ್ಗಸೂಚಿಯಲ್ಲಿ ಪೂರೈಸಲಾಗುತ್ತದೆ.
ಅದಕ್ಕೆ ತಕ್ಕ ಗುರಿಯನ್ನು ಇಟ್ಟುಕೊಳ್ಳಬೇಕು. ಮುಂದಿನ ಸಭೆಯಲ್ಲಿ ಇಲಾಖೆಗಳ ಬೇಡಿಕಗಳು ಹಾಗೂ ಅವರುಗಳು ಕೈಗೊಂಡ ಅಭಿವೃದ್ಧಿಯನ್ನು ಪರಿಶೀಲಿಸಲು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಿದರು. ಕೃಷಿ, ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ , ಅಕ್ಷರ ದಾಸೋಹ, ತೋಟಗಾರಿಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಪಶುಪಾಲನ, ಸಮಾಜ ಕಲ್ಯಾಣ, ಸಾರ್ವಜನಿಕ ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ, ಅಲ್ಪಸಂಖ್ಯಾತರ, ಹಿಂದುಳಿದ ವರ್ಗಗಳ ಕಲ್ಯಾಣ, ಜಿಲ್ಲಾ ಕೈಗಾರಿಕಾ ಕೇಂದ್ರ, ಕೈಮಗ್ಗ ಮತ್ತು ಜವಳಿ ಇಲಾಖೆ , ಅಂಬೇಡ್ಕರ ನಿಗಮ ಇಲಾಖೆಗಳ ಪ್ರಗತಿ ಪರಿಶೀಲನೆಯನ್ನು ನಡೆಸಲಾಯಿತು.
ಸಭೆಯಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಖಂಡೂ, ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.