News Karnataka Kannada
Saturday, May 04 2024
ಉತ್ತರಕನ್ನಡ

ಕಾರವಾರ: ಕೈತೋಟವನ್ನು ಅಭಿವೃದ್ದಿ ಪಡಿಸಲು ಹೆಚ್ಚಿನ ಗುರಿಗೆ ಸೂಚನೆ

Karwar: Higher targets for developing gardens
Photo Credit : By Author

ಕಾರವಾರ: ಕೈತೋಟವನ್ನು ಸಮೃದ್ಧವಾಗಿ ಅಭಿವೃದ್ದಿ ಪಡಿಸಲು ಹೆಚ್ಚಿನ ಗುರಿಯನ್ನು ರೂಪಿಸಿಕೊಳ್ಳುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪಿ. ಹೇಮಲತ ಅವರು ಹೇಳಿದರು.

ನಗರದ ಜಿಪಂ ಸಭಾಂಗಣದಲ್ಲಿ ಶನಿವಾರ ನಡೆದ ಮಾಸಿಕ ಕೆಡಿಪಿ ಹಾಗೂ ಸಾಮಾನ್ಯ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಆಯಾ ಇಲಾಖೆಗಳ ಹೊಸ ಯೋಜನೆಗಳ ಬೇಡಿಕೆಗಳನ್ನು ಅದರ ಮಾರ್ಗಸೂಚಿಯಲ್ಲಿ ಪೂರೈಸಲಾಗುತ್ತದೆ.

ಅದಕ್ಕೆ ತಕ್ಕ ಗುರಿಯನ್ನು ಇಟ್ಟುಕೊಳ್ಳಬೇಕು. ಮುಂದಿನ ಸಭೆಯಲ್ಲಿ ಇಲಾಖೆಗಳ ಬೇಡಿಕಗಳು ಹಾಗೂ ಅವರುಗಳು ಕೈಗೊಂಡ ಅಭಿವೃದ್ಧಿಯನ್ನು ಪರಿಶೀಲಿಸಲು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಿದರು. ಕೃಷಿ, ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ , ಅಕ್ಷರ ದಾಸೋಹ, ತೋಟಗಾರಿಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಪಶುಪಾಲನ, ಸಮಾಜ ಕಲ್ಯಾಣ, ಸಾರ್ವಜನಿಕ ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ, ಅಲ್ಪಸಂಖ್ಯಾತರ, ಹಿಂದುಳಿದ ವರ್ಗಗಳ ಕಲ್ಯಾಣ, ಜಿಲ್ಲಾ ಕೈಗಾರಿಕಾ ಕೇಂದ್ರ, ಕೈಮಗ್ಗ ಮತ್ತು ಜವಳಿ ಇಲಾಖೆ , ಅಂಬೇಡ್ಕರ ನಿಗಮ ಇಲಾಖೆಗಳ ಪ್ರಗತಿ ಪರಿಶೀಲನೆಯನ್ನು ನಡೆಸಲಾಯಿತು.

ಸಭೆಯಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಖಂಡೂ, ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು