News Karnataka Kannada
Tuesday, May 07 2024
ಉತ್ತರಕನ್ನಡ

ಕಾರವಾರ: ಗೃಹರಕ್ಷಕರ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

Home Guards' annual sports meet begins
Photo Credit : By Author

ಕಾರವಾರ: ಕ್ರೀಡೆಯಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ಸದೃಢವಾಗಿರಲು ಸಾಧ್ಯ ಎಂದು ಹಿರಿಯ ಪತ್ರಕರ್ತ ಸದಾಶಿವ ಎಂ.ಎಸ್ ಹೇಳಿದರು.

ಇಲ್ಲಿನ ಕಾಜುಬಾಗದ ಪೋಲಿಸ್ ಕವಾಯತು ಮೈದಾನದಲ್ಲಿ ಗೃಹರಕ್ಷಕರ ಜಿಲ್ಲಾ ಮಟ್ಟದ ವೃತ್ತಿಪರ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಕ್ರೀಡೆಯಿಂದ ಇನ್ನಷ್ಟು ಕ್ರಿಯಾಶೀಲತೆ ಮೈಗೂಡಿಸಲು ಸಾಧ್ಯ. ಇನ್ನು ಸಮಾಜದ ಹಿತಕ್ಕಾಗಿ ನಿಸ್ವಾರ್ಥದಿಂದ, ಶಿಸ್ತುಬದ್ಧವಾಗಿ ಹಗಲು ರಾತ್ರಿ ಸೇವೆ ಸಲ್ಲಿಸುತ್ತಿರುವ ಗೃಹರಕ್ಷಕರು ಸಮಾಜದ ಬಹುದೊಡ್ಡ ಆಸ್ತಿ. ನಾವು ಅವರಿಗೆ ಋಣಿಯಾಗಿರಬೇಕು  ಕಾನೂನು ಪರಿಪಾಲನೆಯ ವಿವಿಧ ಕಾರ್ಯಗಳಲ್ಲಿ ತಮ್ಮದೇ ಆದ ಕೊಡುಗೆ ನೀಡುತ್ತಿರುವ ಗೃಹ ರಕ್ಷಕರ ಸೇವೆಯು ಸದಾ ಸ್ಮರಣೀಯ ಎಂದರು.

ಅಧ್ಯಕ್ಷತೆ ವಹಿಸಿದ್ದ ಗೃಹರಕ್ಷಕದಳದ ಜಿಲ್ಲಾ ಸಮಾದೇಷ್ಠ ದೀಪಕ ಗೋಕರ್ಣ, ಕ್ರೀಡಾಕೂಟದಲ್ಲಿ ಕ್ರೀಡಾ ಸ್ಪೂರ್ತಿಯಿಂದ ಗೃಹರಕ್ಷಕರು ಪಾಲ್ಗೊಳ್ಳುವಂತೆ ಮನವಿ ಮಾಡಿದರು.

ಜಿಲ್ಲಾ ಮಟ್ಟದಲ್ಲಿ ವಿಜೇತರಾದ ೩೫ ಅರ್ಹ ಕ್ರೀಡಾಪಟುಗಳು ಮಂಗಳೂರಿನಲ್ಲಿ ಇದೇ ೧೩ ರಿಂದ ೧೫ ರವರೆಗೆ ನಡೆಯಲಿರುವ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ. ವಲಯ ಮಟ್ಟದಲ್ಲಿ ವಿಜೇತರಾದವರು ನ. ೧೮ ರಿಂದ ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲಿದ್ದಾರೆ.

ಉತ್ತಮ ಆಟದ ಮೂಲಕ ಜಿಲ್ಲೆಗೆ ಕೀರ್ತಿ ತರುವಂತೆ ಕ್ರೀಡಾಪಟುಗಳಿಗೆ ಶುಭ ಹಾರೈಸಿದರು.  ಕ್ರೀಡಾಕೂಟದ ನಿರ್ಣಾಯಕರಾದ ರಾಜಾಸಾಬ್ ಡೆಂಗಣ್ಣನವರ್, ಜೈವಂತ ನಾಗೇಕರ, ಪ್ರವೀಣ ತಳೇಕರ, ರಫೀಕ್ ಶೇಖ್, ಇಲಾಖೆ ಸಿಬ್ಬಂದಿ ಮಧು, ಮಾಯಾ ಕಾಳೆ ಹಾಗೂ ಕುಮಟಾ ಘಟಕಾಧಿಕಾರಿ ಸಿ.ಡಿ.ನಾಯ್ಕ, ಮಲ್ಲಾಪುರ ಪ್ರಬಾರಿ ಘಟಕಾಧಿಕಾರಿ ಪ್ರಭು ಮುದ್ದಕ್ಕನವರ್ ಇದ್ದರು. ಚೆಂಡಿಯಾದ ಘಟಕಾಧಿಕಾರಿ ರಾಘವೇಂದ್ರ ಗಾಂವಕರ್ ಸ್ವಾಗತಿಸಿ ನಿರೂಪಿಸಿದರು. ಕಾರವಾರ ಘಟಕದ ಎಸ್.ಕೆ.ನಾಯ್ಕ ವಂದಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು