News Karnataka Kannada
Saturday, May 04 2024
ಉತ್ತರಕನ್ನಡ

ಕಾರವಾರ: ಸಮಾಜದಲ್ಲಿ ಶಾಂತಿ ಕಾಪಾಡುವಲ್ಲಿ ಗೃಹರಕ್ಷಕ ಸೇವೆ ಸ್ಮರಣೀಯ – ಅರವಿಂದ ಕಲಗುಜ್ಜಿ

Home guard's service in maintaining peace in the society is memorable: Aravind Kalagujji
Photo Credit : By Author

ಕಾರವಾರ: ಸಮಾಜದಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಪೊಲೀಸರೊಂದಿಗೆ ಸರಿಸಮಾನರಾಗಿ ಸೇವೆ ಸಲ್ಲಿಸುವ ಗೃಹರಕ್ಷರ ಪಾತ್ರ ಶ್ಲಾಘನೀಯ ಎಂದು ಡಿವೈಎಸ್ಪಿ ಅರವಿಂದ ಕಲಗುಜ್ಜಿ ಹೇಳಿದರು.

ಇಲ್ಲಿನ ಕೋಡಿಬಾಗದ ಜಿಲ್ಲಾ ಗೃಹರಕ್ಷಕದಳ ಕಚೇರಿಯ ಆವರಣದಲ್ಲಿ ಗೃಹರಕ್ಷಕದಳ ದಿನಾಚರಣೆಯನ್ನು ದೀಪ ಬೆಳಗಿಸಿ ಉದ್ಘಾಟಿಸಿ ಅವರು ಮಾತನಾಡಿದರು.

ಕಾನೂನು ಪರಿಪಾಲನೆಯ ವಿವಿಧ ಕಾರ್ಯಗಳಲ್ಲಿ ತಮ್ಮದೇ ಆದ ಕೊಡುಗೆ ನೀಡುತ್ತಿರುವ ಗೃಹರಕ್ಷಕರ ಸೇವೆಯು ಸದಾ ಸ್ಮರಣೀಯ. ಶಿಸ್ತು, ಸಂಯಮ ಹಾಗೂ ಬದ್ಧತೆಯಿಂದ ಸೇವೆ ಸಲ್ಲಿಸುತ್ತಿರುವ ಗೃಹರಕ್ಷಕರು ಸಮಾಜದ ಬಹು ದೊಡ್ಡ ಆಸ್ತಿ ಎಂದರು.

ಕೊವಿಡ್ ಸಂದರ್ಭದಲ್ಲಿ ಗೃಹರಕ್ಷಕರ ಸೇವೆಯನ್ನು ಸ್ಮರಿಸಿದರು. ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಮಂಜುನಾಥ ಸಾಲಿ ಮಾತನಾಡಿ, ಅಗ್ನಿಶಾಮಕದಳ, ಪೋಲಿಸ್ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಗೃಹರಕ್ಷಕರು ಮೌಲ್ಯಯುತ ಸೇವೆ ಸಲ್ಲಿಸುತ್ತಿದ್ದಾರೆ. ಯಾವುದೇ ಪ್ರತಿಫಲದ ಅಪೇಕ್ಷೆ ಇಲ್ಲದೇ ನಿಷ್ಕಾಮ ಸೇವೆಯಲ್ಲಿ ತೊಡಗಿರುವ ಗೃಹರಕ್ಷಕರು ಸಮಾಜಕ್ಕೆ ಮಾದರಿಯಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಗೃಹರಕ್ಷಕದಳದ ಕಮಾಂಡೇಟ್ ದೀಪಕ ಗೋಕರ್ಣ ವಹಿಸಿದ್ದರು. ಕಾರ್ಯಕ್ರಮದಲ್ಲಿ ಘಟಕದ ಅತ್ಯುತ್ತಮ ನಿರ್ವಹಣೆಗಾಗಿ ದಾಂಡೇಲಿ ಘಟಕದ ಡಿ.ಬಿ.ಕಾಂಬ್ಳೆ ಹಾಗೂ ಕುಮಟಾ ಘಟಕಾಧಿಕಾರಿ ಸಿ.ಡಿ.ನಾಯ್ಕ ಅವರನ್ನು ಫಲಪುಷ್ಪ, ಶಾಲು ಹೊದಿಸಿ ಸನ್ಮಾನಿಸಲಾಯಿತು.

ಕಾರವಾರ ಘಟಕದ ಎಸ್.ಕೆ.ನಾಯ್ಕ ಪ್ರಾರ್ಥಿಸಿ ವಂದಿಸಿದರು. ಕಚೇರಿಯ ಸಿಬ್ಬಂದಿ ಶ್ರೀನಿವಾಸ ನಾಯಕ ಸ್ವಾಗತಿಸಿದರು. ಚೆಂಡಿಯಾ ಘಟಕದ ರಾಘವೇಂದ್ರ ಗಾಂವಕರ್ ನಿರೂಪಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು