News Karnataka Kannada
Friday, May 03 2024
ಉತ್ತರಕನ್ನಡ

ಕಾರವಾರ: ಸಿದ್ದರದಲ್ಲಿ ಅಕ್ರಮವಾಗಿ ತೆಗೆದ ಮರಳು ವಶಕ್ಕೆ

Karwar: Illegal sand extracted from Siddhara seized
Photo Credit : News Kannada

ಕಾರವಾರ: ತಾಲೂಕಿನ ಸಿದ್ದರದಲ್ಲಿ ಕಾಳಿ ಹಿನ್ನಿರಿನ ಪ್ರದೇಶದಲ್ಲಿ ಅಕ್ರಮವಾಗಿ ಮರಳು ತೆಗೆದ ಬಗ್ಗೆ ಖಚಿತ ಮಾಹಿತಿ ಆಧರಿಸಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಮರಳು ಜಪ್ತಿ ಮಾಡಿದ್ದಾರೆ. ಕಾಳಿ ನದಿಯ ವಿವಿಧ ಕಡೆಯ ಹಿನ್ನಿರಿನ ಪ್ರದೇಶದಲ್ಲಿ ಅಕ್ರಮವಾಗಿ ಮರಳು ಗಣಿಗಾರಿಕೆ ನಡೆಯುತ್ತಿದೆ.

ಈ ಬಗ್ಗೆ ಮಾಹಿತಿಯನ್ನು ಆಧರಿಸಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ದಾಳಿ ನಡೆಸುತ್ತಿದ್ದಾರೆ. ಅದರಂತೆ ತಾಲೂಕಿನ ಸಿದ್ದರದಲ್ಲಿ ರಾತ್ರಿ ವೇಳೆಯಲ್ಲಿ ಸುಮಾರು 30 ಮೆಟ್ರಿಕ್ ಟನ್ ನಷ್ಟು ಮರಳನ್ನು ಕಾಳಿ ನದಿಯಿಂದ ತೆಗೆಯಲಾಗಿತ್ತು. ದಾಳಿ ನಡೆಸಿದ ಇಲಾಖೆ ಅಧಿಕಾರಿ ಆಶಾ ಅವರು ಸ್ಥಳದಲ್ಲಿದ್ದ ಮರಳು ವಶಕ್ಕೆ ಪಡೆದುಕೊಂಡಿದ್ದಾರೆ.

ಇಲ್ಲಿನ ಕಾಳಿ ನದಿಯಲ್ಲಿ ಮರಳು ತೆಗೆಯಲು ಅವಕಾಶವಿಲ್ಲ. ಆದರೂ ಸಹ ಹಗಲು-ರಾತ್ರಿ ಎನ್ನದೆ ಮರಳನ್ನು ಅನಧಿಕೃತವಾಗಿ ತೆಗೆಯಲಾಗುತ್ತಿದೆ ಎನ್ನುವ ಆರೋಪವಿದೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ಸಿಬ್ಬಂದಿ ಕೊರತೆಯ ನಡುವೆಯೂ ಅಕ್ರಮ ಮರಳುಗಾರಿಕೆ ತಡೆಯಲು ಕ್ರಮಕೈಗೊಳ್ಳುತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು