News Karnataka Kannada
Monday, May 06 2024
ಉತ್ತರಕನ್ನಡ

ಕಾರವಾರ: ಹೆದ್ದಾರಿ ಅವ್ಯವಸ್ಥೆ, ಗ್ರಾಮಸ್ಥರಿಂದ ಐಆರ್‌ಬಿ ಅಧಿಕಾರಿಗಳಿಗೆ ಮುತ್ತಿಗೆ ಹಾಕಿ ಪ್ರತಿಭಟನೆ

IRB officials gheraoed by villagers over highway chaos
Photo Credit : By Author

ಕಾರವಾರ: ಹೆದ್ದಾರಿ ಕಾಮಗಾರಿಯ ಅವ್ಯವಸ್ಥೆಯ ವಿರುದ್ಧ ಗ್ರಾಮಸ್ಥರು ಅಧಿಕಾರಿಗಳಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದ ಘಟನೆ ಕಾರವಾರ ತಾಲ್ಲೂಕಿನ ಅಮದಳ್ಳಿಯಲ್ಲಿ ನಡೆದಿದೆ.

ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ಅಗಲೀಕರಣ ಕಾರ್ಯ ನಡೆಸುತ್ತಿರುವ ಐಆರ್‌ಬಿ ಸಂಸ್ಥೆಯ ಅವೈಜ್ಞಾನಿಕ ಕಾಮಗಾರಿಯಿಂದಾಗಿ ಗ್ರಾಮಸ್ಥರು ಪ್ರತಿನಿತ್ಯ ಓಡಾಡಲು ಪರದಾಡಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಹೆದ್ದಾರಿ ಅಗಲೀಕರಣ ನಡೆಸಿರುವ ಐಆರ್‌ಬಿ ಬಸ್ ನಿಲ್ದಾಣ, ಸರ್ವೀಸ್ ರಸ್ತೆಯಂತಹ ಅಗತ್ಯ ವ್ಯವಸ್ಥೆಗಳನ್ನ ಕಲ್ಪಿಸಿಲ್ಲ. ಅಲ್ಲದೇ ಗ್ರಾಮದಲ್ಲಿ ಹಾದು ಹೋಗಿರುವ ರಸ್ತೆಯನ್ನ ಎರಡು ಕಡೆಗಳಲ್ಲಿ ಅನಗತ್ಯವಾಗಿ ಬೈಪಾಸ್ ಮಾಡಿದ್ದು ಇದರಿಂದ ಗ್ರಾಮಸ್ಥರು ತೊಂದರೆ ಅನುಭವಿಸುವಂತಾಗಿದೆ.

ಅಲ್ಲದೇ ಹೆದ್ದಾರಿಯಿಂದ ಮಳೆ ನೀರು ಹರಿದುಹೋಗಲು ಕಾಲುವೆ ವ್ಯವಸ್ಥೆಯನ್ನ ಸಹ ಕಲ್ಪಿಸಿಲ್ಲವಾಗಿದ್ದು ಇದು ಮಳೆಗಾಲದಲ್ಲಿ ಸಂಕಷ್ಟ ಉಂಟುಮಾಡಲಿದೆ. ಹೀಗಾಗಿ ಈ ಎಲ್ಲ ಅವ್ಯವಸ್ಥೆಗಳನ್ನ ಸರಿಪಡಿಸಿಕೊಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಪ್ರತಿಭಟಿಸಿದ ಗ್ರಾಮಸ್ಥರು, ಹೆದ್ದಾರಿ ಕಾಮಗಾರಿ ಗುತ್ತಿಗೆ ಪಡೆದಿರುವ ಐಆರ್‌ಬಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು