ಕಾರವಾರ: ನರೇಗಾ ಯೋಜನೆಯಡಿ ಹೆಚ್ಚಿನ ಪ್ರಗತಿ ಸಾಧಿಸಲು ಅವಶ್ಯವಿರುವ ಅನುಕೂಲತೆಗಳನ್ನು ಕಲ್ಪಿಸಲು ಅನುಷ್ಠಾನ ಇಲಾಖೆಯೊಂದಿಗೆ ಗ್ರಾಮ ಪಂಚಾಯತ್ಗಳು ಕೈಜೋಡಿಸುತ್ತವೆ ಎಂದು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ಪ್ರವೀಣ್ ಬಿ ಕಟ್ಟಿ ಅಭಿಪ್ರಾಯಪಟ್ಟರು.
ಮಂಗಳವಾರ ಮುಂಡಗೋಡ ತಾಲೂಕು ಪಂಚಾಯತ್ ಸಭಾಭವನದಲ್ಲಿ ನಡೆದ ನರೇಗಾ ಯೋಜನೆಯಡಿ ವಿವಿಧ ಇಲಾಖೆಗಳ ಜಂಟಿ ಸಭೆ ನಡೆಸಿ ಅವರು ಮಾತನಾಡಿದರು.
ತಾಲೂಕಿನಾದ್ಯಂತ ವಿವಿಧ ಇಲಾಖೆಗಳಲ್ಲಿ ಮಾನವ ದಿನಗಳ ಪ್ರಗತಿ ಸಾಧಿಸುವ ನಿಟ್ಟಿನಲ್ಲಿ ಕೃಷಿ ಪೌಷ್ಟಿಕ ಕೈತೋಟ, ಶಾಲಾ ಪೌಷ್ಟಿಕ ಕೈತೋಟ, ಜಿಪಿಎಲ್ಎಫ್ ನರ್ಸರಿ ನಿರ್ಮಾಣ, ಎನ್ಆರ್.ಎಲ್ಎಂ ಶೆಡ್ ನಿರ್ಮಾಣ, ಅಮೃತ ಸರೋವರ ನಿರ್ಮಾಣ ತ್ವರಿತವಾಗಿ ಕಾರ್ಯಗತವಾಗಬೇಕು. ಹಾಗೂ ಕಾಮಗಾರಿಗಳಲ್ಲಿ ಮಹಿಳೆಯರ ಭಾಗವಹಿಸುವಿಕೆ ಹೆಚ್ಚಿಸುವ ನಿಟ್ಟಿನಲ್ಲಿ ಶೀಘ್ರ ಕ್ರಮ ಕೈಗೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ನರೇಗಾ ಸಹಾಯಕ ನಿರ್ದೇಶಕರಾದ ಟಿ ವಾಯ್ ದಾಸನಕೊಪ್ಪ, ಕೃಷಿ, ತೋಟಗಾರಿಕೆ, ಅಕ್ಷರದಾಸೋಹ, ಸಾಮಾಜಿಕ ಅರಣ್ಯ, ಪಿಆರ್ಇಡಿ ಇಲಾಖೆಯ ಅಧಿಕಾರಿಗಳು, ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ತಾಲೂಕು ತಾಂತ್ರಿಕ ಸಂಯೋಜಕರು, ಐಇಸಿ ಸಂಯೋಜಕರು, ತಾಂತ್ರಿಕ ಸಹಾಯಕರು, ಬಿಎಫ್ಟಿ, ಸಿಬ್ಬಂದಿ ವರ್ಗದವರು ಇದ್ದರು.