News Karnataka Kannada
Tuesday, April 30 2024
ಉತ್ತರಕನ್ನಡ

ಕಾರವಾರ: ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಮಹಿಳಾ ಅಭ್ಯರ್ಥಿಗಳಿಗೆ ಹೆಚ್ಚಿನ ಆದ್ಯತೆ

Karnataka Rashtra Samithi (KRS) has given priority to women candidates.
Photo Credit : By Author

ಕಾರವಾರ: ಮುಂಬರುವ 2023ರ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಮಹಿಳಾ ಅಭ್ಯರ್ಥಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ ಎಂದು ಪಕ್ಷದ ರಾಜ್ಯ ಯುವ ಘಟಕ ಅಧ್ಯಕ್ಷ ರಘು ಜಾಣಗೆರೆ ಹೇಳಿದರು.

ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು ರಾಜ್ಯದಲ್ಲಿ ಮತ್ತು ರಾಷ್ಟ್ರದಲ್ಲಿ ಮಹಿಳೆಯರ ಪರಿಸ್ಥಿತಿ ಉತ್ತಮವಾಗಿಲ್ಲ. ಪ್ರತಿನಿತ್ಯ ಮಹಿಳೆಯರ ಮೇಲೆ ಅವರು ಕೆಲಸ ಮಾಡುವ ಸ್ಥಳದಲ್ಲಿ, ಮನೆಗಳಲ್ಲಿ ಮತ್ತು ಇತರ ಕಡೆಗಳಲ್ಲಿ ದೌರ್ಜನ್ಯ, ಕಿರುಕುಳ ಮತ್ತು ಶೋಷಣೆ ಹೆಚ್ಚುತ್ತಿರುವುದನ್ನು ಕಾಣುತ್ತಿದ್ದೇವೆ. ಮಹಿಳೆಯರ ರಾಜಕೀಯ ಪ್ರಾತಿನಿಧ್ಯ ಬಹಳ ಕಡಿಮೆ ಪ್ರಮಾಣದಲ್ಲಿರುವುದು ಇದಕ್ಕೆ ಕಾರಣ. ಪ್ರಸ್ತುತ ಶಾಸನಸಭೆಗಳಲ್ಲಿ ಮಹಿಳೆಯರ ಪ್ರಾತಿನಿಧ್ಯ ನಗಣ್ಯವಾಗಿದ್ದು, ಈ ಪರಿಸ್ಥಿತಿಯನ್ನು ಉತ್ತಮಪಡಿಸುವ ಅಗತ್ಯವಿದೆ ಎಂದರು.

ರಾಜಕೀಯ ಪಕ್ಷಗಳು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದರೆ, ತ್ವರಿತವಾಗಿ ಬದಲಾವಣೆ ತರಬಹುದು. ಪ್ರಮುಖ ರಾಜಕೀಯ ಪಕ್ಷಗಳು ಮಹಿಳಾ ಸಬಲೀಕರಣದ ಬಗ್ಗೆ ಕೇವಲ ಮಾತನಾಡುತ್ತ ಕಾಲಹರಣ ಮಾಡುತ್ತಿವೆಯೆ ಹೊರತು, ಅವರಿಗೆ ನೀಡಬೇಕಾದ ಅವಕಾಶಗಳನ್ನು ಕಿತ್ತುಕೊಳ್ಳಲು ಎಲ್ಲಾ ವ್ಯವಸ್ಥೆಗಳನ್ನು ನಿರ್ಮಿಸಿಕೊಂಡಿವೆ. ಗ್ರಾಮೀಣ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡಿ ದಶಕಗಳ ಕಳೆದಿದ್ದರೂ ಅಲ್ಲಿ ಪುರುಷರದ್ದೇ ಪಾರಮ್ಯ ನಡೆಯುತ್ತಿದೆ. ಕೇವಲ ಹೆಸರಿಗೆ ಮಾತ್ರ ಮಹಿಳಾ ಚುನಾಯಿತ ಪ್ರತಿನಿಧಿಗಳಿದ್ದು, ನಿಜವಾದ ಅಧಿಕಾರ ಅವರ ಪತಿ, ತಂದೆ ಅಥವಾ ಮಕ್ಕಳು ಚಲಾಯಿಸುತ್ತಿದ್ದಾರೆ ಎಂದು ಆರೋಪಿಸಿದರು.

ರಾಜ್ಯದಲ್ಲಿನ ಪಕ್ಷಗಳು ಎಂದಿಗೂ ಮಹಿಳೆಯರಿಗೆ, ಅವರಿಗೆ ಸಿಗಬೇಕಾದ ರಾಜಕೀಯ ಸ್ಥಾನಮಾನವನ್ನು ನೀಡುವುದಿಲ್ಲ. ಆ ಪಕ್ಷಗಳಿಗೆ ವಾಮ ಮಾರ್ಗದಲ್ಲಿ ಅಧಿಕಾರ ಹಿಡಿಯುವುದು ಆದ್ಯತೆಯೆ ಹೊರತು, ಮಹಿಳೆಯರ ಸಬಲೀಕರಣ ಅವರ ಮೇಲಿನ ದೌರ್ಜನ್ಯ ನಿವಾರಣೆ ಬೇಕಿಲ್ಲ. ಈ ನಿಟ್ಟಿನಲ್ಲಿ ನಾಯಕತ್ವ ಗುಣವುಳ್ಳ ಮಹಿಳೆಯರು ಇಂದು ಸಮಾಜಕ್ಕೆ ಮತ್ತು ರಾಜಕೀಯ ಕ್ಷೇತ್ರಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ತೊಡಗಿಸಿಕೊಳ್ಳುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಕೆ.ಆರ್.ಎಸ್. ಪಕ್ಷವು ಮಹಿಳೆಯರಿಗೆ ವಿಶೇಷ ಆದ್ಯತೆಯನ್ನು ನೀಡುತ್ತಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವು 1/3 ಕ್ಷೇತ್ರಗಳನ್ನು ಮಹಿಳೆಯರಿಗೆ ಮೀಸಲಿಡಲಿದ್ದು, ಅರ್ಹ ಮಹಿಳಾ ಅಭ್ಯರ್ಥಿಗಳಿಗೆ ಅಂದಿನ ಪರಿಸ್ಥಿತಿಗೆ ಅನುಗುಣವಾಗಿ ಪಕ್ಷವೇ ಚುನಾವಣಾ ವೆಚ್ಚವನ್ನು ಕೂಡ ಭರಿಸಲಿದೆ ಎಂದರು.

ಈಗಾಗಲೇ ವಿಧಾನಸಭಾ ಚುನಾವಣೆಗೆ 170 ಕ್ಕೂ ಹೆಚ್ಚು ಆಕಾಂಕ್ಷಿಗಳ ಸಂದರ್ಶನ ನಡೆಸಿ, ಅವರಲ್ಲಿ 60 ಕ್ಷೇತ್ರಗಳಿಗೆ ಸಂಭಾವ್ಯ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ಈಗಾಗಲೇ ಅವರೆಲ್ಲ, ಆಯಾ ಕ್ಷೇತ್ರಗಳಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಕಳೆದ ಒಂದು ವರ್ಷದಿಂದ ಕೆಆರ್‌ಎಸ್ ಪಕ್ಷವು ನಿರಂತರವಾಗಿ ಪ್ರತಿ ತಿಂಗಳು ಸಂಭಾವ್ಯ ಅಭ್ಯರ್ಥಿಗಳ ಆಯ್ಕೆಗಾಗಿ ಸಂದರ್ಶನ ನಡೆಸಿಕೊಂಡು ಬರುತ್ತಿದ್ದು, ಡಿ.10 ಮತ್ತು 11 ರಂದು ಸಂಭಾವ್ಯ ಅಭ್ಯರ್ಥಿಗಳಿಗೆ ಸಂದರ್ಶನ ನಡೆಸಲಾಗುತ್ತಿದೆ. ವ್ಯವಸ್ಥೆಯನ್ನು ಬದಲಾಯಿಸಬೇಕೆಂಬ ಆಕಾಂಕ್ಷೆಯುಳ್ಳವರು, ವಿಶೇಷವಾಗಿ ಮಹಿಳೆಯರು ಈ ಸಂದರ್ಶನ ಪ್ರಕ್ರಿಯೆಯಲ್ಲಿ ಭಾಗವಹಿಸಿ, ಸ್ವಚ್ಚ-ಸುಂದರ-ಸದೃಢ-ಸಮೃದ್ಧ ಕರ್ನಾಟಕ ಕಟ್ಟುವಲ್ಲಿ ಪ್ರಮುಖ ಪಾತ್ರ ವಹಿಸಬೇಕು ಎಂದರು.

ಈ ಸಂದರ್ಭದಲ್ಲಿ ಪಕ್ಷದ ಪ್ರಮುಖರಾದ ಎಂ.ವಿ.ರಾಮಾನುಜ, ಜೀವನ ಎಲ್.,ಕೃಷ್ಣ ಯು. ಈ., ಉಲ್ಲಾಸ ಮುಂತಾದವರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು