ಕಾರವಾರ: ಕರ್ತವ್ಯದಲ್ಲಿದ್ದ ವಿದ್ಯುತ್ ಇಲಾಖೆಯ ಲೈನ್ ಮ್ಯಾನ್ ಓರ್ವರು ಕಿನ್ನರದಲ್ಲಿ ಆಕಸ್ಮಿಕವಾಗಿ ಬಿದ್ದು ಗಂಭೀರ ಗಾಯಗೊಂಡು ಹೆಚ್ಚಿನ ಚಿಕತ್ಸೆಗೆ ಹುಬ್ಬಳ್ಳಿಗೆ ಸಾಗಿಸುತ್ತಿರುವಾಗ ಮೃತಪಟ್ಟ ಘಟನೆ ನಡೆದಿದೆ.
ತಾಲೂಕಿನ ಸಿದ್ದರ, ಕಿನ್ನರ, ವೈಲವಾಡಾ ಭಾಗದಲ್ಲಿ ಲೈನ್ಮನ್ ಆಗಿದ್ದ ವಿಜಯಕುಮಾರ ಮಾದರ ಮೃತ ದುರ್ದೈವಿಯಾಗಿದ್ದಾರೆ. ತಮ್ಮ ವ್ಯಾಪ್ತಿಯಲ್ಲಿ ಕರ್ತವ್ಯದಲ್ಲಿ ನಿರತರಾಗಿದ್ದ ವೇಳೆ ವಿದ್ಯುತ್ ಕಂಬದ ಮೇಲಿನಿಂದ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದಾರೆ ಎನ್ನಲಾಗಿದೆ. ತಕ್ಷಣ ಅವರನ್ನು ಕ್ರಿಮ್ಸ್ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆಂದು ಹುಬ್ಬಳ್ಳಿಗೆ ಸಾಗಿಸುತ್ತಿದ್ದ ವೇಳೆ ಮಾರ್ಗ ಮಧ್ಯ ಮೃತಪಟ್ಟಿದ್ದಾರೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.