News Karnataka Kannada
Sunday, May 05 2024
ಉತ್ತರಕನ್ನಡ

ಕಾರವಾರ: ಪೌರ ಕಾರ್ಮಿಕರ ಖಾಯಂಗೊಳಿಸುವ ಕುರಿತು ಸಭೆ

Karawara
Photo Credit : By Author

ಕಾರವಾರ: ಮ್ಯಾನ್ಯುಯಲ್ ಸ್ಕ್ಯಾವೆಂಜರ್ಗಳ ಪುನರ್ವಸತಿ ಹಾಗೂ ಪೌರಕಾರ್ಮಿಕರ ಖಾಯಂಗೊಳಿಸುವ ಕುರಿತು ಸರಕಾರದ ಮಟ್ಟದಲ್ಲಿ ಚರ್ಚಿಸಲಾಗಿದ್ದು, ಅಂತವರ ಪುನರ್ವಸತಿಗಾಗಿ ಕಾರ್ಯಕ್ರಮ ಅನುಷ್ಠಾನಗೊಳಿಸಲು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದೆ ಎಂದು ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಎಂ. ಶಿವಣ್ಣ (ಕೋಟೆ) ತಿಳಿಸಿದರು.

ರಾಜ್ಯದ ೧೮ ಜಿಲ್ಲೆಗಳಲ್ಲಿ ಕೈಗೊಂಡ ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಗಳ ಸಮೀಕ್ಷೆಯ ಕುರಿತು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಎಂ. ಶಿವಣ್ಣ ಬೆಂಗಳೂರಿನ ವಿಕಾಸ ಸೌಧದ ಸಭಾಭವನದಲ್ಲಿ ವಿಡಿಯೋ ಸಂವಾದದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಸಮೀಕ್ಷೆ ಕುರಿತಾಗಿ ಜಿಲ್ಲಾ ಮಟ್ಟದ ಅಧಿಕಾರಿಗಳು, ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿಗಳು ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಬೇಕು. ಯಾವ ಕಾರ್ಮಿಕನು ಸರಕಾರದ ಸವಲತ್ತಿನಿಂದ ವಂಚಿತರಾಗದ ರೀತಿಯಲ್ಲಿ ಬಂದಂತಹ ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಗಳ ಅರ್ಜಿಗಳನ್ನು ಪರಿಶೀಲಿಸಬೇಕು, ಅರ್ಜಿ ತಿರಸ್ಕರಿಸಲು ಸ್ಪಷ್ಟ ಕಾರಣಗಳನ್ನು ತಿಳಿಸಬೇಕು, ಈ ಕುರಿತು ೧೦ ದಿನಗಳೊಳಗಾಗಿ ವಸ್ತು ನಿಷ್ಠ ವರದಿಯನ್ನು ಆಯೋಗಕ್ಕೆ ಸಲ್ಲಿಸಬೇಕು ಎಂದು ಜಿಲ್ಲಾ ಮಟ್ಟದ ಕಲ್ಯಾಣಾಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳ, ಪಂಚಾಯತರಾಜ್ ಅಧಿಕಾರಿಗಳ ಸಮೀಕ್ಷಾ ಸಮಿತಿ ಸಮೀಕ್ಷೆ ಮಾಡಿ, ಪರಿಶೀಲಿಸಿ, ನಿರ್ಣಯಿಸಿ ಒಪ್ಪಿಗೆ ನೀಡಿದ ನಂತರ ಅರ್ಜಿಯನ್ನು ಪುನರ್ ಪರಿಶೀಲಿಸುವ ಕಾರ್ಯ ಅವಶ್ಯವಿಲ್ಲದ ಕಾರಣದಿಂದ ಅರ್ಜಿಯನ್ನು ಪುರಸ್ಕರಿಸಬೇಕು.

ಈ ಕುರಿತಾಗಿ ಯಾವುದೇ ರೀತಿಯ ಒತ್ತಡ ತಂತ್ರ ಅನುಸರಿಸಿ ಅರ್ಜಿ ಹಾಕದಂತೆ ಮಾಡಿದ್ದಲ್ಲಿ ಮ್ಯಾನ್ಯುಯಲ್ ಸ್ಕಾö್ಯವೆಂಜರ್ ಆಯೋಗಕ್ಕೆ ದೂರು ನೀಡಿದಲ್ಲಿ ಕಾನೂನು ರೀತ್ಯ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಹಾಗಾಗಿ ಯಾವ ಅಧಿಕಾರಿಗಳು ಅಂತಹ ಕಾರ್ಯವನ್ನು ಎಸಗಬಾರದು ಎಂದು ಎಚ್ಚರಿಸಿದರು.

ಈ ಸಂವಾದದಲ್ಲಿ ಉತ್ತರಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಉಪಸ್ಥಿತರಿದ್ದು ಆಯೋಗದ ಅಧ್ಯಕ್ಷ ಎಂ. ಶಿವಣ್ಣ ಅವರು ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಕುರಿತು ಜಿಲ್ಲೆಯಲ್ಲಿ ಸಲ್ಲಿಕೆಯಾದ ಅರ್ಜಿಗಳ ಹಾಗೂ ಅನೈರ್ಮಲ್ಯ ಶೌಚಾಲಯಗಳ ಮಾಹಿತಿ ಕೇಳಿದಾಗ, ಜಿಲ್ಲಾಧಿಕಾರಿಗಳು ಜಿಲ್ಲೆಯಲ್ಲಿ ಸಮೀಕ್ಷೆ ಕೈಗೊಳ್ಳಲಾಗಿದೆ.

ಯಾವುದೇ ಅರ್ಜಿಗಳು ಸಲ್ಲಿಕೆಯಾಗಿಲ್ಲ ಹಾಗೂ ನಮ್ಮ ಜಿಲ್ಲೆಯಲ್ಲಿ ಪ್ರತಿ ಮನೆಗೂ ಶೌಚಾಲಯ ವ್ಯವಸ್ಥೆ ಇದ್ದು ಯಾವುದೇ ರೀತಿಯಲ್ಲಿ ಅನೈರ್ಮಲ್ಯ ಶೌಚಾಲಯಗಳು ಇಲ್ಲ. ಪ್ರತಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಕ್ಕಿಂಗ್ ಮಷಿನ್ ಲಭ್ಯವಿರುವ ಕಾರಣದಿಂದ ಯಾವುದೇ ರೀತಿಯ ಮ್ಯಾನ್ಯುಯಲ್ ಸ್ಕ್ಯಾವೆಂಜರ್ ರ ಬಳಕೆ ಇಲ್ಲ ಆ ಕಾರಣದಿಂದ ಯಾವುದೇ ಅರ್ಜಿಗಳು ಸಲ್ಲಿಕೆಯಾಗಿಲ್ಲ ಎಂದು ತಿಳಿಸಿದರು.

ಈ ವಿಡಿಯೋ ಸಂವಾದ ಸಭೆಯಲ್ಲಿ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಕಾರ್ಯದರ್ಶಿ ಚಂದ್ರಕಲಾ, ಪಂಚಾಯತರಾಜ್ ಆಯುಕ್ತಾಲಯದ ಪ್ರತಿನಿಧಿಗಳು ಹಾಗೂ ಮಂಡ್ಯ, ರಾಮನಗರ, ತುಮಕೂರು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಬಳ್ಳಾರಿ, ಕೊಪ್ಪಳ, ಶಿವಮೊಗ್ಗ, ಬೀದರ್, ಗದಗ, ಚಿತ್ರದುರ್ಗ, ಉಡುಪಿ, ದಕ್ಷಿಣಕನ್ನಡ, ಕೊಡಗು, ಉತ್ತರಕನ್ನಡ ಮತ್ತು ಮೈಸೂರು ಜಿಲ್ಲೆಯ ಜಿಲ್ಲಾಧಿಕಾರಿಗಳು ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು