ಕಾರವಾರ: ಸರ್ಕಾರ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಸಾಕಷ್ಟು ಕಾಮಗಾರಿಗಳನ್ನು ನೀಡುತ್ತಿದೆ. ನಮ್ಮ ಲಯೋಲ ವಿಕಾಸ ಒಕ್ಕೂಟದ ಸದಸ್ಯರು ಇದರ ಸದುಪಯೋಗ ಪಡೆಯಬೇಕು ಎಂದು ಲಯೋಲ ವಿಕಾಸ ಕೇಂದ್ರದ ಫಾದರ್ ಅನೀಲ್ ಡಿಸೋಜಾ ಅಭಿಪ್ರಾಯಪಟ್ಟರು.
ಮುಂಡಗೋಡ ತಾಲೂಕಿನ ಲಯೋಲ ವಿಕಾಸ ಕೇಂದ್ರದಲ್ಲಿ ಎಲ್ವಿಕೆ ಒಕ್ಕೂಟದಿಂದ ಆಯೋಜಿಸಿದ್ದ ನರೇಗಾ ಮಾಹಿತಿ ವಿನಿಮಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ನರೇಗಾ ಯೋಜನೆಯಡಿ ಇರುವ ಸೌಲಭ್ಯಗಳ ಬಗ್ಗೆ ಇಂದು ಮಾಹಿತಿ ಪಡೆದಿದ್ದಿರಿ. ಈ ತರಬೇತಿ ಕೇವಲ ಕೇಳುವುದಕ್ಕೆ ಸಿಮೀತವಾಗಿರದೆ, ಸಂಬಂಧಪಟ್ಟ ಗ್ರಾಮ ಪಂಚಾಯತ್ ಸಂಪರ್ಕಿಸಿ ಕಾಮಗಾರಿ ಪಡೆಯುವ ಮೂಲಕ ಆರ್ಥಿಕವಾಗಿ ಸಬಲರಾಗಬೇಕು. ಜೊತೆಗೆ ತಮ್ಮ ಸುತ್ತಲಿನವರಿಗೂ ಯೋಜನೆಯ ಮಾಹಿತಿ ತಲುಪಿಸಿ ಯೋಜನೆಯ ಯಶಸ್ಸಿಗೆ ಕೈಜೋಡಿಸಬೇಕು.
ನರೇಗಾ ಯೋಜನೆಯ ರೂಪುರೇಷೆಗಳು, ಉದ್ದೇಶ, ಉಪಯೋಗ ಹಾಗೂ ಕಾಮಗಾರಿಗಳ ಸಂಪೂರ್ಣ ಮಾಹಿತಿ ಕುರಿತು ತಾಲೂಕು ಪಂಚಾಯತ್ ಐಇಸಿ ಸಂಯೋಜಕಿ ಪೂರ್ಣಿಮಾ ಗೌಡ ವಿವರಿಸಿದರು. ಕೂಲಿಕಾರರಿಗೆ ಅವಶ್ಯಕವಿರುವ ಇ-ಶ್ರಮ್ ಹಾಗೂ ಆಭಾ ಕಾರ್ಡ ಪ್ರತಿಯೊಬ್ಬರು ಪಡೆಯಬೇಕೆಂದರು.
ಈ ಸಂದರ್ಭದಲ್ಲಿ ಒಕ್ಕೂಟದ ಕಾಂಚನಾ ತಹಸೀಲ್ದಾರ್, ಶಾಂತವ್ವ ವಾಲ್ಮೀಕಿ, ಮಂಗಳಾ ಮೊರೆ, ಕಾತೂರು ಹಾಗೂ ಚೌಡಳ್ಳಿ ಗ್ರಾಮದ ಒಕ್ಕೂಟದ ಎಲ್ಲಾ ಸದಸ್ಯರು ಭಾಗಿಯಾಗಿದ್ದರು.
ಭಾರತದ ಎಂಡಿಎಚ್ ಹಾಗೂ ಎವರೆಸ್ಟ್ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…
ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…
ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್ನನ್ನು ಪೊಲೀಸರು ಬಂಧಿಸಿದ್ದಾರೆ.…
ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್ಎಸ್ಎಲ್ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…
ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…
ಜಾಗತಿಕವಾಗಿ ಚಿನ್ನಕ್ಕೆ ಈಗ ಸಖತ್ ಬೇಡಿಕೆ ಸೃಷ್ಟಿಯಾಗಿರುವುದು ಈ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ. ಕಳೆದ ಒಂದು ತಿಂಗಳಿನಿಂದ ಚಿನ್ನದ ಬೆಲೆ…