News Karnataka Kannada
Monday, April 29 2024
ಉತ್ತರಕನ್ನಡ

ಕಾರವಾರ:  ಮೀನುಗಾರರ ಅಭಿವೃದ್ಧಿಗೆ ಸರಕಾರ ಬದ್ಧ ಎಂದ ಶಾಸಕಿ ರೂಪಾಲಿ ನಾಯ್ಕ

Mla Rupali Naik said that the government is committed to the development of fishermen.
Photo Credit : By Author

ಕಾರವಾರ: ಮೀನುಗಾರರ ಏಳಿಗೆಗೆ  ಸರ್ಕಾರ ಬದ್ಧವಾಗಿದ್ದು,  ಸೌಲಭ್ಯಗಳನ್ನು ಪಡೆದುಕೊಳ್ಳುವಂತೆ ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದ ಶಾಸಕಿ ರೂಪಾಲಿ‌ ಎಸ್. ನಾಯ್ಕ ಹೇಳಿದರು.

ನಗರದ ಸುಂಕೇರಿಯ ಜಗತ್ತಕಟ್ಟಾದ ಗಾಬಿತವಾಡದಲ್ಲಿ ಮೀನುಗಾರರ ಅಹವಾಲು ಸ್ವೀಕಾರ ಹಾಗೂ ಮೀನುಗಾರಿಕೆ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿದರು.ಸರ್ಕಾರ ಮೀನುಗಾರ ಸಮುದಾಯಕ್ಕಾಗಿ ಹಲವು ಯೋಜನೆಗಳನ್ನು ಸೌಲಭ್ಯಗಳನ್ನು ನೀಡುತ್ತಿದೆ. ನಮ್ಮ ನೆಚ್ಚಿನ ಪ್ರಧಾನಿ  ನರೇಂದ್ರ ಮೋದಿ ಅವರು ಮೀನುಗಾರಿಕೆ ಹಾಗೂ ನೀರಿಗಾಗಿ ಪ್ರತ್ಯೇಕ ಸಚಿವಾಲಯವನ್ನು ಪ್ರಾರಂಭಿಸಿದ್ದಾರೆ.

ಸರ್ಕಾರ ಮೀನುಗಾರರಿಗೂ ಕಿಸಾನ್‌ ಕಾರ್ಡನ್ನು ನೀಡುತ್ತಿದೆ. ಅದರ ಸೌಲಭ್ಯವನ್ನು ಪಡೆದುಕೊಳ್ಳಬೇಕು. ಸರ್ಕಾರ ಮೀನುಗಾರರ ಹಿತಕ್ಕೆ ಬದ್ದವಾಗಿದೆ. ಸಬ್ಸಿಡಿಯಲ್ಲಿ ಸಾಲ ಸೌಲಭ್ಯಗಳನ್ನು ನೀಡುತ್ತಿದೆ. ಎಲ್ಲರೂ ಇದರ ಸದುಪಯೋಗ ಪಡೆದುಕೊಳ್ಳಬಹುದು. ಮೀನುಗಾರರಿಗೆ ಅನುಕೂಲಕ್ಕೆ ಬೃಹತ್‌ ಬಂದರು ನಿರ್ಮಾಣವಾಗಲಿದೆ. ಎಲ್ಲ ರೀತಿಯ ಅನುಕೂಲಗಳು ಸಿಗಲಿದೆ ಎಂದರು.

ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಆರೋಗ್ಯ ಸರಿ ಇಲ್ಲದಿದ್ದರೆ ಆರ್ಥಿಕ ಸಮಸ್ಯೆಯೂ ಕಾಡುತ್ತದೆ. ಮಾನಸಿಕ ನೆಮ್ಮದಿಯೂ ಹಾಳಾಗುತ್ತದೆ‌ ಎಂದರು.  ಈ ಸಂದರ್ಭದಲ್ಲಿ ಬಿಜೆಪಿ ನಗರಮಂಡಲದ ಅಧ್ಯಕ್ಷರಾದ ನಾಗೇಶ್‌ ಕುರ್ಡೇಕರ, ಮಹಿಳಾ ಮೊರ್ಚಾದ ವೃಂದಾ ದಾಮ್ಸಾಡೇಕರ, ಪದಾಧಿಕಾರಿಗಳು, ಬೂತ್  ಪದಾಧಿಕಾರಿಗಳು, ಕಾರ್ಯಕರ್ತರು, ಸಾರ್ವಜನಿಕರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು