News Karnataka Kannada
Friday, May 10 2024
ಉತ್ತರಕನ್ನಡ

ಕಾರವಾರ: ಶಾಲಾ ಸಂಸತ್ ಕಾರ್ಯಕ್ರಮ ಉದ್ಘಾಟಿಸಿದ ಎಂಎಲ್ಸಿ

Karwar: MLC inaugurates school parliament programme
Photo Credit : By Author

ಕಾರವಾರ: ಮುದಗಾದ ಜನತಾ ವಿದ್ಯಾಲಯದಲ್ಲಿ ಶಾಲಾ ಸಂಸತ್ ಮತ್ತು ವಿವಿಧ ಸಂಘಗಳ ಉದ್ಘಾಟನೆಯನ್ನು ಎಂಎಲ್ಸಿ ಗಣಪತಿ ಉಳ್ವೇಕರ್ ಅವರು ನೇರೆವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಎಂಎಲ್ಸಿ ಗಣಪತಿ ಉಳ್ವೇಕರ್, ಅವರು ಸಂವಿಧಾನ ಅಂದರೆ ಶಾಸಕಾಂಗ , ಕಾರ್ಯಾಂಗ ಮತ್ತು ನ್ಯಾಯಾಂಗಗಳ ಮುಖ್ಯಸ್ಥರಾಗಿ ರಾಷ್ಟ್ರಪತಿ ಇರುತ್ತಾರೆ. ರಾಷ್ಟ್ರಪತಿಗಳಿಗೆ ಸಲಹೆಗಳನ್ನು ನೀಡಲು ಪ್ರಧಾನಮಂತ್ರಿಯ ನೇತೃತ್ವದಲ್ಲಿ ಒಂದು ಮಂತ್ರಿಮಂಡಲ ಹೊಂದಿರಲು ಸಂವಿಧಾನ ಅವಕಾಶ ನೀಡುತ್ತದೆ.

ಶಾಲಾ ಸಂಸತ್ತಿನಲ್ಲಿ ಆಯ್ಕೆ ಆದ ಮಕ್ಕಳಿಗೆ ವಿಧಾನ ಪರಿಷತ್ ಶಾಸಕರು ರಾಷ್ಟ್ರ ಧ್ವಜವನ್ನು ನೀಡಿದರು. ಈ ವೇಳೆ ಶಾಲಾ ಅಭಿವೃದ್ಧಿ ಸಮಿತಿ ಸದಸ್ಯರು ಒಂದು ಶಾಲೆ ದತ್ತು ಪಡೆಯುವಂತೆ ಮನವಿ ನೀಡಿದರು. ಇದಕ್ಕೆ ಸ್ಪಂದನೆ ನೀಡಿದ ಉಳ್ವೇಕರ್ ಅವರು ಒಂದು ಶಾಲೆ ದತ್ತು ತೆಗೆದುಕೊಳ್ಳುತ್ತೇನೆ ಪತ್ರಿ ತಿಂಗಳಲ್ಲಿ ಒಂದು ದಿನ ಈ ಶಾಲೆಗೆ ಭೇಟಿ ನೀಡುತ್ತೇನೆ ಎಂದರು.

ಈ ವೇಳೆ ಶಾಲಾ ಅಭಿವೃದ್ಧಿ ಸಮಿತಿಯಿಂದ ವಿಧಾನ ಪರಿಷತ್ ಶಾಸಕರಾದ ಗಣಪತಿ ಉಳ್ವೇಕರ್ ಅವರಿಗೆ ಸನ್ಮಾನಿಸಿ ಗೌರವಿಸಿದರು. ಇವರ ಜೊತೆಗೆ ನಗರಸಭೆ ಅಧ್ಯಕ್ಷ ಡಾ. ನಿತೀನ್ ಪಿಕಳೆ, ಗ್ರಾಪಂ ಅಧ್ಯಕ್ಷೆ ಆಶಾ ನಾಯ್ಕ, ಉಪಾಧ್ಯಕ್ಷ ರವಿ ದುರ್ಗೇಕರ್, ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಉಮಾಕಾಂತ ಹರಿಕಂತ್ರ, ಶಿಕ್ಷಕರಾದ ಜೈರಂಗನಾಥ ಸೇರಿದಂತೆ ಇನ್ನಿತರರು ಇದ್ದರು

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು