ಕಾರವಾರ: ಅಂಡಮಾನ್-ನಿಕೋಬಾರ್ ದ್ವೀಪ ಪ್ರದೇಶದಲ್ಲಿ ನೌಕಾಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅಂಕೋಲಾ ತಾಲೂಕಿನ ಲಕ್ಷ್ಮೀಶ್ವರ ಮೂಲದ ನೌಕಾಸೇನಾ ಸಿಬ್ಬಂದಿ ಮೃತಪಟ್ಟಿದ್ದಾರೆ.
ಕಳೆದ ನಾಲ್ಕು ದಿನಗಳ ಹಿಂದೆ ಆಕಸ್ಮಿಕ ದುರಂತದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಅವರ ಪಾರ್ಥಿವ ಶರೀರವನ್ನು ಹುಟ್ಟೂರಿಗೆ ತರಲಾಗುತ್ತಿದೆ. ನಾಗರಾಜ ಮುಕುಂದ ಕಳಸ (33) ಅಕಾಲಿಕವಾಗಿ ನಿಧನರಾಗಿರುವ ನೌಕಾಸೇನಾ ಸಿಬ್ಬಂದಿ. 2010 ರಲ್ಲಿ ಐಎನ್ಎಸ್ ಚಿಲಕ ಕಾರವಾರದ ಮೂಲಕ ಭಾರತೀಯ ನೌಕಾಸೇನೆ ಸೇರಿಕೊಂಡು ದೇಶಸೇವೆಗೆ ಅಣಿಯಾಗಿದ್ದರು.
ಬಳಿಕ ಮುಂಬೈನಲ್ಲಿ ಸೇವೆ ಸಲ್ಲಿಸಿ ಅಂಡಮಾನ್-ನಿಕೋಬಾರ್ ದ್ವೀಪಗಳಲ್ಲಿ ತಮ್ಮ ಸೇವೆಯನ್ನು ಮುಂದುವರೆಸಿದ್ದರು. ಸೇವಾ ನಿವೃತ್ತಿಗೆ ಎರಡು ವರ್ಷ ಬಾಕಿ ಇರುವಾಗಲೇ ಮೃತಪಟ್ಡಿದ್ದಾರೆ.