News Karnataka Kannada
Thursday, May 09 2024
ಉತ್ತರಕನ್ನಡ

ಕಾರವಾರ: ದಸರಾ ಕ್ರೀಡಾಕೂಟದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ನಿವೇದಿತಾ

Karwar: Nivedita from Karwar has been selected for the state level in the Dasara Games.
Photo Credit : By Author

ಕಾರವಾರ: ಧಾರವಾಡದ ಆರ್.ಎನ್.ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಬೆಳಗಾವಿ ವಿಭಾಗ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಉತ್ತರ ಕನ್ನದ ಜಿಲ್ಲೆಯಿಂದ ಸ್ಪರ್ಧಿಸಿದ್ದ ನಿವೇದಿತಾ ಸಾವಂತ, 13.42 ಮೀಟರ್ ದೂರಕ್ಕೆ ‌ಗುಂಡು ಎಸೆಯುವ ಮೂಲಕ ಹಾಗೂ 41.34 ಮೀಟರ್ ಗೆ ಡಿಸ್ಕಸ್ ಎಸೆಯುವ ಮೂಲಕ ಎರಡೂ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.

ಈ ಮೂಲಕ ಎರಡು ಚಿನ್ನದ ಪದಕಗಳನ್ನು ಪಡೆದು, ಇದೇ ಬರುವ 25ರಿಂದ ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ನಡೆಯುವ ರಾಜ್ಯಮಟ್ಟದ ದಸರಾ ಕ್ರೀಡಾಕೂಟದಲ್ಲಿ ಉತ್ತರ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾಳೆ. ಡಿಸ್ಕಸ್ ಎಸೆತ ಸ್ಪರ್ಧೆಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿರುವ ನಿವೇದಿತಾ, ಈ ಹಿಂದೆ ರಾಜ್ಯ ಮಟ್ಟದ ದಸರಾ ಕ್ರೀಡಾಕೂಟದಲ್ಲಿಯೂ ಚಿನ್ನದ ಪದಕಗಳನ್ನು ಪಡೆದು ಸಾದನೆ ಮಾಡಿದ್ದರು.

ಇತ್ತೀಚಿಗೆ ಬೆಂಗಳೂರಿನ ಕಂಠರವ ಕ್ರೀಡಾಂಗಣದಲ್ಲಿ ನಡೆದ ಮುಕ್ತ ಮಹಿಳೆಯರ ಡಿಸ್ಕಸ್ ಎಸೆತ ಸ್ಪರ್ಧೆಯಲ್ಲಿ ನಿವೇದಿತಾ ಚಿನ್ನದ ಪದಕವನ್ನು ಪಡೆದಿದ್ದು, ಈ ಬಾರಿ ರಾಜ್ಯಮಟ್ಟದ ದಸರಾ ಕ್ರೀಡಾಕೂಟದಲ್ಲಿ ಪದಕ ಗೆಲ್ಲುವ ವಿಶ್ವಾಸ ಹೊಂದಿದ್ದಾರೆ. ಕಾರವಾರದ ಅಥ್ಲೆಟಿಕ್ಸ್ ತರಬೆತುದಾರ ಪ್ರಕಾಶ ರೇವಣಕರ ಅವರಿಗೆ ತರಬೇತಿ ನೀಡಿದ್ದಾರೆ. ನಿವೇದಿತಾ ಕ್ರೀಡಾ ಕೋಟಾದಡಿಯಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಪದವಿ ಪಡೆದು ಪ್ರಸ್ತುತ ಟಿಸಿಎಸ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು