News Karnataka Kannada
Monday, April 29 2024
ಉತ್ತರಕನ್ನಡ

ಕಾರವಾರ: ಎನ್ಎಸ್ ಯುಐನ ಪದಾಧಿಕಾರಿಗಳ ಆಯ್ಕೆ

Kasar (1)
Photo Credit : By Author

ಕಾರವಾರ: ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾದ ಕಾರವಾರ- ಅಂಕೋಲಾ ವಿಧಾನಸಭಾ ಕ್ಷೇತ್ರದ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು, ಕ್ಷೇತ್ರದಲ್ಲಿ ಇನ್ನು ಮುಂದೆ ಇನ್ನಷ್ಟು ಸಕ್ರಿಯವಾಗಿ ಕಾರ್ಯಕ್ರಮಗಳನ್ನ ಸಂಘಟಿಸಲಾಗುತ್ತದೆ ಎಂದು ಎನ್ಎಸ್ ಯುಐನ ಜಿಲ್ಲಾಧ್ಯಕ್ಷ ವಿಶ್ವ ಗೌಡ ಹೇಳಿದರು.

ಕಾರವಾರದ ಜಿಲ್ಲಾ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರವಾರ- ಅಂಕೋಲಾ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರನ್ನಾಗಿ ಸಾಗರ್ ಬಿಲಿಯೆ ಹಾಗೂ ಕಾರವಾರ ತಾಲೂಕು ಅಧ್ಯಕ್ಷರನ್ನಾಗಿ ಚಿರಾಗ್ ಮಾಸೂರಕರ್ ಅವರನ್ನು ಆಯ್ಕೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಇವರ ನೇತೃತ್ವದಲ್ಲಿ ಕಾರವಾರ- ಅಂಕೋಲಾ ವಿಧಾನಸಭಾ ಕ್ಷೇತ್ರದಲ್ಲಿ ಎನ್ಎಸ್ ಯುಐ ಸಂಘಟನೆ ಬಲಪಡಿಸುವ ಕಾರ್ಯ ನಡೆಸಲಾಗುತ್ತದೆ ಎಂದರು.

ಭಾರತ್ ಜೋಡೋ ಯಾತ್ರೆಯ ಅಂಗವಾಗಿ ಎಲ್ಲಾ ವಿಧಾನಸಭಾ ಕ್ಷೇತ್ರದಲ್ಲೂ ಭಾಷಣ ಹಾಗೂ ಚಿತ್ರಕಲೆ ಸ್ಪರ್ಧೆ ಆಯೋಜಿಸಲಾಗುತ್ತಿದೆ. ಆಯ್ದ ಶಾಲಾ- ಕಾಲೇಜುಗಳಲ್ಲಿ ನ.9ರಿಂದ ಈ ಸ್ಪರ್ಧೆ ನಡೆಯಲಿದ್ದು, ನ.14ಕ್ಕೆ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಲಿದೆ. ಈಗಾಗಲೇ ಈ ಬಗ್ಗೆ ಎಲ್ಲಾ ಶಾಲಾ- ಕಾಲೇಜುಗಳಿಗೆ ತೆರಳಿ ಪ್ರಚಾರ ಮಾಡಲಾಗಿದೆ ಎಂದರು.

ಕಾರವಾರದಲ್ಲಿ ಎನ್ಎಸ್ ಯುಐ ಬಲಪಡಿಸಲು ಜಿಲ್ಲಾ ಪಂಚಾಯತಿ ಮಾಜಿ ಸದಸ್ಯೆ ಚೈತ್ರಾ ಕೊಠಾಕರ್ ಅವರು ಬಹಳ ಸಹಕಾರ ನೀಡಿದ್ದು, ಅವರಿಗೆ ಧನ್ಯವಾದ ಹೇಳುತ್ತೇವೆ ಎಂದರು. ಅಶ್ರಫ್, ಸೂರಜ್ ಮುಂತಾದವರು ಕೂಡ ಸಹಕರಿಸಿದ್ದು, ಅವರೆಲ್ಲರಿಗೂ ಧನ್ಯವಾದ ಹೇಳುತ್ತೇನೆ. ಇನ್ನಷ್ಟು ಸಂಘಟನೆ ಬಲಪಡಿಸಿಕೊಳ್ಳಲು ಎನ್ಎಸ್ ಐಯು ಸದಸ್ಯತ್ವ ನೋಂದಣಿ ಕಾರ್ಯವನ್ನೂ ಮಾಡುತ್ತಿದ್ದೇವೆ ಎಂದರು‌.

ಪತ್ರಿಕಾಗೋಷ್ಠಿಯಲ್ಲಿ ಕಾರವಾರ- ಅಂಕೋಲಾ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಸಾಗರ್ ಬಿಲಿಯೆ, ಕಾರವಾರ ತಾಲೂಕು ಅಧ್ಯಕ್ಷ ಚಿರಾಗ್ ಮಾಸೂರಕರ್, ಈರಪ್ಪ, ಸೈಯದ್ ಅಶ್ರಫ್, ಪ್ರತೀಕ್ ತೆಂಡೂಲ್ಕರ್, ರೂಪೇಶ್ ನಾಗೇಕರ್ ಮುಂತಾದವರು ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು