ಕಾರವಾರ: ಕಾರ್ಮಿಕ ಖಾತೆ ಸಚಿವರ ಶಿವರಾಮ ಹೆಬ್ಬಾರ್ ಅವರು ಮುಂಡಗೋಡ ಪಟ್ಟಣದ ಸ್ವಾಮಿ ವಿವೇಕಾನಂದ ಬಯಲು ರಂಗಮಂದಿರದಲ್ಲಿ ಪಟ್ಟಣ ಪಂಚಾಯತ ಹಾಗೂ ಕೊಳಗೇರಿ ಅಭಿವೃದ್ಧಿ ಮಂಡಳಿಯ ವತಿಯಿಂದ ಆಯೋಜಿಸಿದ್ದ ಅಧಿಕೃತ ಹಕ್ಕು ಪತ್ರ ವಿತರಣಾ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕವಾಗಿ ಉದ್ಘಾಟಿಸಿದರು.
ಮೂರನೇ ಹಂತದಲ್ಲಿ ಪಟ್ಟಣದ ಕಂಬಾರಗಟ್ಟಿ, ಲಮಾಣಿ ತಾಂಡ ಹಾಗೂ ಅಂಬೇಡ್ಕರ್ ನಗರದ 235 ಕುಟುಂಬಗಳಿಗೆ ಅಧಿಕೃತ ಹಕ್ಕುಪತ್ರ ವಿತರಿಸಿ,ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಪ.ಪಂಚಾಯತ ಅಧ್ಯಕ್ಷರಾದ ಜಯಸುಧಾ ಬೋವಿವಡ್ಡರ್, ಉಪಾಧ್ಯಕ್ಷ ಶ್ರೀಕಾಂತ ಸಾನು, ಮಂಡಲಾಧ್ಯಕ್ಷರಾದ ನಾಗಭೂಷಣ ಹಾವಣಗಿ, ಜಿಲ್ಲಾ ಪಂಚಾಯತ್ ಸದಸ್ಯ ಎಲ್.ಟಿ.ಪಾಟೀಲ್, ಪ್ರಮುಖರಾದ ಗುಡ್ಡಪ್ಪ ಕಾತೂರ, ಉಮೇಶ್ ಬಿಜಾಪುರ ಸೇರಿದಂತೆ ಪ.ಪಂ ಸದಸ್ಯರು, ನಾಮನಿರ್ದೇಶಿತ ಸದಸ್ಯರು, ಪಕ್ಷದ ವಿವಿಧಸ್ಥರದ ಪದಾಧಿಕಾರಿಗಳು, ಕಾರ್ಯಕರ್ತರು ಇದ್ದರು.