ಕಾರವಾರ: ಜಿಲ್ಲೆಯಲ್ಲಿ ಹಾದುಹೋಗುವ ನಾಲ್ಕು ರಾಷ್ಟ್ರೀಯ ಹೆದ್ದಾರಿಗಳ ಕಾಮಗಾರಿ ಶೀಘ್ರವೇ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಸಂಸದ ಅನಂತಕುಮಾರ್ ಹೆಗಡೆ ಅವರು ಹೇಳಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾತನಾಡಿದ ಅವರ ಈ ವರ್ಷದೊಳಗೆ ಹೆದ್ದಾರಿ ಕಾಮಗಾರಿಗಳನ್ನು ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ತಿಳಿಸಿದ್ದಾರೆ.
ಗೋವಾ ಗಡಿಯಿಂದ ಖಾನಾಪುರ, ಶಿರಸಿಯಿಂದ ಹಾವೇರಿ, ಶಿರಸಿಯಿಂದ ಬೇಲೇಕೇರಿ ಹಾಗೂ ಕಾರವಾರದಿಂದ ಭಟ್ಕಳದ ತನಕ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಕುರಿತು ಅವಲೋಕನ ಮಾಡಲಾಗಿದೆ. ಕಾಮಗಾರಿಯಲ್ಲಿ ಅನೇಕ ನ್ಯೂನ್ಯತೆಗಳಿದ್ದು, ನ್ಯೂನ್ಯತೆಗಳನ್ನು ಸರಿಪಡಿಸಿಕೊಂಡು ಸಮಯದ ಮಿತಿಯೊಳಗೆ ಕಾಮಗಾರಿ ಪೂರ್ಣಗೊಳಿಸಲು ಅಚಿತಿಮ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ನೇವಿ ಅಧಿಕಾರಿಗಳೊಂದಿಗೂ ಸಭೆ ನಡೆಸಲಾಗಿದೆ. ಕೃತಕ ಪ್ರವಾಹ ಉಂಟಾಗುವಲ್ಲಿ ಕ್ರಮ ವಹಿಸುವಂತೆ ಸೂಚಿಸಲಾಗಿದೆ. ಶಾಶ್ವತ ಪರಿಹಾರಕ್ಕೆ ರಾಜಕಾಲುವೆಗಳನ್ನು ನಿರ್ಮಿಸಲು ಈಗಾಗಲೇ ನೌಕಾನೆಲೆಯಿಂದ ಟೆಂಡರ್ಗಳನ್ನ ಕರೆಯಲಾಗಿದೆ.
ಟ್ರಾಫಿಕ್ಗೆ ಸಂಬಂಧಿಸಿದಂತೆ ಅಪಾಯಕಾರಿ ಸ್ಥಳಗಳು, ಅಸಮರ್ಪಕ ತಿರುವು ಮುಂತಾದವುಗಳ ಮಾಹಿತಿಗಳನ್ನು ಪೊಲೀಸ್ ವರಿಷ್ಠಾಧಿಕಾರಿಗಳು ನೀಡಿದ್ದು, ಅವುಗಳೆಲ್ಲವನ್ನೂ ಸರಿಪಡಿಸಲು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚಿಸಿದ್ದೇನೆ. 15 ದಿನಗಳಲ್ಲಿ ಇವುಗಳನ್ನ ಸರಿಪಡಿಸುವುದಾಗಿ ಗುತ್ತಿಗೆದಾರರು ಹಾಗೂ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದ್ದಾರೆ ಎಂದರು.
ಇವೆಲ್ಲ ಮುಗಿದು ಸೆಪ್ಟೆಂಬರ್- ಅಕ್ಟೋಬರ್ ತಿಂಗಳಿನಲ್ಲಿ ಎಲ್ಲಾ ಶಾಸಕರು ಹಾಗೂ ಅಧಿಕಾರಿಗಳೊಂದಿಗೆ ಸ್ಥಳಕ್ಕ ತೆರಳಿ ಪರಿಶೀಲನೆ ಮಾಡಲಾಗುವುದು ಎಂದು ತಿಳಿಸಿದರು.