News Karnataka Kannada
Friday, May 10 2024
ಉತ್ತರಕನ್ನಡ

ಕಾರವಾರ: ವರ್ಷದೊಳಗೆ ಹೆದ್ದಾರಿ ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ

Karwar: Officials instructed to complete highway work within a year
Photo Credit : By Author
ಕಾರವಾರ: ಜಿಲ್ಲೆಯಲ್ಲಿ ಹಾದುಹೋಗುವ ನಾಲ್ಕು ರಾಷ್ಟ್ರೀಯ ಹೆದ್ದಾರಿಗಳ ಕಾಮಗಾರಿ ಶೀಘ್ರವೇ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಸಂಸದ ಅನಂತಕುಮಾರ್ ಹೆಗಡೆ ಅವರು ಹೇಳಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾತನಾಡಿದ ಅವರ ಈ ವರ್ಷದೊಳಗೆ ಹೆದ್ದಾರಿ ಕಾಮಗಾರಿಗಳನ್ನು ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ತಿಳಿಸಿದ್ದಾರೆ.
ಗೋವಾ ಗಡಿಯಿಂದ ಖಾನಾಪುರ, ಶಿರಸಿಯಿಂದ ಹಾವೇರಿ, ಶಿರಸಿಯಿಂದ ಬೇಲೇಕೇರಿ ಹಾಗೂ ಕಾರವಾರದಿಂದ ಭಟ್ಕಳದ ತನಕ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಕುರಿತು ಅವಲೋಕನ ಮಾಡಲಾಗಿದೆ. ಕಾಮಗಾರಿಯಲ್ಲಿ ಅನೇಕ ನ್ಯೂನ್ಯತೆಗಳಿದ್ದು, ನ್ಯೂನ್ಯತೆಗಳನ್ನು ಸರಿಪಡಿಸಿಕೊಂಡು ಸಮಯದ ಮಿತಿಯೊಳಗೆ ಕಾಮಗಾರಿ ಪೂರ್ಣಗೊಳಿಸಲು ಅಚಿತಿಮ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ನೇವಿ ಅಧಿಕಾರಿಗಳೊಂದಿಗೂ ಸಭೆ ನಡೆಸಲಾಗಿದೆ. ಕೃತಕ ಪ್ರವಾಹ ಉಂಟಾಗುವಲ್ಲಿ ಕ್ರಮ ವಹಿಸುವಂತೆ ಸೂಚಿಸಲಾಗಿದೆ. ಶಾಶ್ವತ ಪರಿಹಾರಕ್ಕೆ ರಾಜಕಾಲುವೆಗಳನ್ನು ನಿರ್ಮಿಸಲು ಈಗಾಗಲೇ ನೌಕಾನೆಲೆಯಿಂದ ಟೆಂಡರ್‌ಗಳನ್ನ ಕರೆಯಲಾಗಿದೆ.
ಟ್ರಾಫಿಕ್‌ಗೆ ಸಂಬಂಧಿಸಿದಂತೆ ಅಪಾಯಕಾರಿ ಸ್ಥಳಗಳು, ಅಸಮರ್ಪಕ ತಿರುವು ಮುಂತಾದವುಗಳ ಮಾಹಿತಿಗಳನ್ನು ಪೊಲೀಸ್ ವರಿಷ್ಠಾಧಿಕಾರಿಗಳು ನೀಡಿದ್ದು, ಅವುಗಳೆಲ್ಲವನ್ನೂ ಸರಿಪಡಿಸಲು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚಿಸಿದ್ದೇನೆ. 15 ದಿನಗಳಲ್ಲಿ ಇವುಗಳನ್ನ ಸರಿಪಡಿಸುವುದಾಗಿ ಗುತ್ತಿಗೆದಾರರು ಹಾಗೂ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದ್ದಾರೆ ಎಂದರು.
ಇವೆಲ್ಲ ಮುಗಿದು ಸೆಪ್ಟೆಂಬರ್- ಅಕ್ಟೋಬರ್ ತಿಂಗಳಿನಲ್ಲಿ ಎಲ್ಲಾ ಶಾಸಕರು ಹಾಗೂ ಅಧಿಕಾರಿಗಳೊಂದಿಗೆ ಸ್ಥಳಕ್ಕ ತೆರಳಿ ಪರಿಶೀಲನೆ ಮಾಡಲಾಗುವುದು ಎಂದು ತಿಳಿಸಿದರು.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು