News Karnataka Kannada
Friday, May 03 2024
ಉತ್ತರಕನ್ನಡ

ಕಾರವಾರ: ವಿದ್ಯುತ್ ಪರಿವರ್ತಕಕ್ಕೆ ಕಾರು ಡಿಕ್ಕಿ- ಓರ್ವ ಸಾವು

One killed as car collides with transformer
Photo Credit : By Author

ಕಾರವಾರ: ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಎಡದಿಕ್ಕಿನಲ್ಲಿರುವ ವಿದ್ಯುತ್ ಪರಿವರ್ತಕಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರ್‌ಗೆ ಬೆಂಕಿಹೊತ್ತಿಕೊಂಡು ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು,ಓರ್ವ ಮೃತಪಟ್ಟು, ನಾಲ್ವರು ಗಾಯಗೊಂಡ ಘಟನೆ ಅಂಕೋಲಾದ ಹಾರವಾಡ ರೈಲ್ವೆ ಬ್ರಿಡ್ಜ್ ಬಳಿ ಸಂಭವಿಸಿದೆ.

ಆಂಧ್ರಪ್ರದೇಶದ ಅನಂತಪುರ ನಿವಾಸಿ ರವಿತೇಝ್ ಉಪ್ಪಾರ (21) ಸಾವನ್ನಪ್ಪಿದ ಪದವಿ ವಿದ್ಯಾರ್ಥಿ ಚಾಲಕ ಪವನ ಬಿ., ಬಾಲಚಂದ್ರ ಕೈತಾವರ, ಮೋಹನ ಸಾಯಿ, ಬೊಯಿಜ್ ಕುಮಾರ್ ಗಾಯಗೊಂಡವರು. ಇವರು ಆಂಧ್ರಪ್ರದೇಶದ ಸೆಂಟ್ರಲ್ ಯುನಿರ್ವಸಿಟಿ ಕಾಲೇಜಿನ ವಿದ್ಯಾರ್ಥಿಗಳಾಗಿದ್ದು, ಕಾರಿನಲ್ಲಿ ಗೋವಾಕ್ಕೆ ಪ್ರವಾಸಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಅವಘಡ ನಡೆದಿದೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಾರವಾರ ಸಿವಿಲ್ ಆಸ್ಪತ್ರೆಗೆ ಸಾಗಿಸಲಾಗಿದೆ.

ಘಟನಾ ಸ್ಥಳಕ್ಕೆ ಪಿಐ ಸಂತೋಷ ಶೆಟ್ಟಿ, ಪಿಎಸ್‌ ಐ ಪ್ರವೀಣಕುಮಾರ ಆರ್. ಭೇಟಿ ನೀಡಿದರು. ಪಿಎಸ್‌ ಐ ಮಹಾಂತೇಶ ವಾಲ್ಮೀಕಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು