News Karnataka Kannada
Tuesday, April 30 2024
ಉತ್ತರಕನ್ನಡ

ಕಾರವಾರ: ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮಕ್ಕೆ ಪಕ್ಷಭೇದವಿಲ್ಲದೆ ಪಾಲ್ಗೊಳ್ಳಿ -ಗಜೇಂದ್ರ ನಾಯ್ಕ

Participate in Prime Minister Narendra Modi's programme irrespective of party affiliations: Gajendra Naik
Photo Credit : News Kannada

ಕಾರವಾರ: ಪ್ರಧಾನಿ ಮೋದಿಯವರು ಪ್ರಪ್ರಥಮವಾಗಿ ನಮ್ಮ ಕಾರವಾರ- ಅಂಕೋಲಾ ಕ್ಷೇತ್ರಕ್ಕೆ ಬರುತ್ತಿರುವುದು ನಮ್ಮೆಲ್ಲರ ಸೌಭಾಗ್ಯ. ಪ್ರತಿಯೊಬ್ಬರೂ ಕಾರ್ಯಕ್ರಮದಲ್ಲಿ ಪಕ್ಷಭೇದವಿಲ್ಲದೇ ಪಾಲ್ಗೊಳ್ಳಿ ಎಂದು ಬಿಜೆಪಿ ಮುಖಂಡ ಡಾ.ಗಜೇಂದ್ರ ನಾಯ್ಕ ಮನವಿ ಮಾಡಿದರು.

ಕಾರವಾರದ ಜಿಲ್ಲಾ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಸಕಿ ರೂಪಾಲಿ ನಾಯ್ಕ ಅವರು ಕ್ಷತ್ರೀಯ ಕೋಮಾರಪಂತ ಸಮಾಜದ ಅಭಿವೃದ್ಧಿಗೋಸ್ಕರ ಸಭಾಭವನ ನಿಮಿ೯ಸಲು 70 ಲಕ್ಷ ಮಂಜೂರು ಮಾಡಿಸಿದ್ದಾರೆ. ಕಾರವಾರ ಕೋಡಿಬಾಗ ರಸ್ತೆಗೆ ಮತ್ತು ಹೂವಿನ ಚೌಕಿಗೆ ಹೆಂಜಾ ನಾಯ್ಕ ಸರ್ಕಲ್ಎಂದು ನಾಮಕರಣ ಮಾಡಿದ್ದಾರೆ ಎಂದು ಹೇಳಿದರು.

ಕ್ಷೇತ್ರದಲ್ಲಿ ಪ್ರಧಾನಿ ಮೋದಿಯವರ ಮಾರ್ಗದರ್ಶನದಲ್ಲಿ ಸಾಕಷ್ಟು ಅಭಿವೃದ್ಧಿಗಳಾಗಿದೆ. ಜನತೆ ಮೇ 3ರಂದು ಅಂಕೋಲಾಕ್ಕೆ ಆಗಮಿಸುತ್ತಿರುವ ಪ್ರಧಾನಿ ಮೋದಿಯವರ ಸಮಾವೇಶಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು. ಕ್ಷತ್ರೀಯ ಕೊಮಾರಪಂತ ಪ್ರತಿಷ್ಠಾನನದ ಅಧ್ಯಕ್ಷ ಆರ್.ಎಸ್.ನಾಯ್ಕ, ಸುಧಾಕರ ನಾಯ್ಕ, ರಾಜೇಂದ್ರ ನಾಯ್ಕ, ಅಶೋಕ ರಾಣೆ ಹಾಜರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು