News Karnataka Kannada
Saturday, April 27 2024
ಉತ್ತರಕನ್ನಡ

ಕಾರವಾರ: ಹೆಬ್ಬಾರರ ಅಭಿವೃದ್ಧಿ ಕಾರ್ಯಗಳ ಬಗ್ಗೆ ಜನರಿಗೆ ಅರಿವಿದೆ – ಉಲ್ಲಾಸ ತುವೇಕರ

People are aware of the development works of Hebbar - UlhasTuvekar
Photo Credit : By Author

ಕಾರವಾರ: ಸಚಿವರೂ ಆಗಿರುವ ಯಲ್ಲಾಪುರ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ ಅವರು ಬಹಳಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಜನತೆಗೆ ಈ ಬಗ್ಗೆ ಅರಿವಿದ್ದು ಜನರೇ ಈ ಕುರಿತು ನಮಗೆ ಮಾಹಿತಿ ನೀಡುತ್ತಿದ್ದಾರೆ ಎಂದು ಗೋವಾ ಶಾಸಕ ಉಲ್ಲಾಸ ತುವೇಕರ ಹೇಳಿದರು.

ಯಲ್ಲಾಪುರ ಪಟ್ಟಣದ ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವು ಗೋವಾದಿಂದ ಇಲ್ಲಿಗೆ ಪಕ್ಷದ ಸಂಘಟನಾ ಕಾರ್ಯಕ್ಕೆ ಬಂದಿದ್ದು ನಿಜ. ಆದರೆ ಕ್ಷೇತ್ರದಲ್ಲಿ ಶಾಸಕರು ಮಾಡಿರುವ ಕೆಲಸಗಳೇ ಅವರಿಗೆ ಜಯದತ್ತ ಸಾಗಿಸುವುದು ಖಚಿತವಾಗಿರುವುದರಿಂದ ನಮ್ಮ ಕೆಲಸ ಸುಲಭವಾಗಿದೆ. ಕೇವಲ ಗೆಲುವಿನ ಅಂತರವನ್ನು ಹೆಚ್ಚಿಸುವತ್ತ ನಮ್ಮೆಲ್ಲ ಕಾರ್ಯಕರ್ತರ ಗಮನವಿದೆ ಎಂದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ ಹೆಗಡೆ ಮಾತನಾಡಿ, ಸುಳ್ಳು ಭರವಸೆಯ ಗ್ಯಾರಂಟಿಕಾರ್ಡ್ ಮುಂದಿಟ್ಟುಕೊಂಡು ಕಾಂಗ್ರೆಸ್ ಮತಯಾಚನೆ ಮಾಡುತ್ತಿದೆ. ಯಾವುದೇ ದಾರಿಯಿಲ್ಲದೆ, ಹತಾಶೆಗೊಂಡಿದೆ ಎಂದರು.

ಈ ಸಂದರ್ಭದಲ್ಲಿ ದಕ್ಷಿಣ ಗೋವಾದ ಜಿಲ್ಲಾ ಕಾರ್ಯದರ್ಶಿ ಪರೇಶ್ ನಾಯ್ಕ, ಪ್ರಮುಖರಾದ ರಾಮು ನಾಯ್ಕ ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು