ಕಾರವಾರ: ಮಹಾತ್ಮ ಗಾಂಧೀಜಿ ಅವರು ಕಂಡ ಗ್ರಾಮ ಸ್ವರಾಜ್ಯದ ಕನಸು ಸಾಕಾರಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಶ್ರಮಿಸುತ್ತಿದ್ದಾರೆ ಎಂದು ಶಾಸಕಿ ರೂಪಾಲಿ ನಾಯ್ಕ ಹೇಳಿದರು.
ನಗರದ ಮಹಾಸತಿ ಕಲ್ಯಾಣ ಮಂಟಪದಲ್ಲಿ ಭಾರತೀಯ ಜನತಾ ಪಕ್ಷ ಕಾರವಾರ ಮಂಡಲ ವತಿಯಿಂದ ಹಮ್ಮಿಕೊಂಡ ಸೇವಾ ಪಾಕ್ಷಿಕ ಅಂಗವಾಗಿ ಮಕ್ಕಳಿಗೆ ನೋಟ್ಬುಕ್ಮತ್ತು ಬ್ಯಾಗ್ಗಳನ್ನು ವಿತರಿಸಿ ಅವರು ಮಾತನಾಡಿದರು. ಮಹಾತ್ಮಾ ಗಾಂಧೀಜಿ ಸ್ವಚ್ಛ ಭಾರತದ ಕನಸು ಕಂಡಿದ್ದರು. ಅದನ್ನೂ ಮಾನ್ಯ ಮೋದಿಜೀ ಜಾರಿಗೆ ತಂದಿದ್ದಾರೆ. ಮಹಾತ್ಮಾ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ಶಾಸ್ತ್ರಿ ಅವರ ಕೊಡುಗೆ ಅವಿಸ್ಮರಣೀಯವಾಗಿದೆ. ಅವರು ಹಾಕಿಕೊಟ್ಟ ಮಾರ್ಗದಲ್ಲಿ ಮುನ್ನಡೆಯೋಣ ಎಂದರು.
ಪಾಠದ ಜತೆಗೆ ಆಟವೂ ಇರಬೇಕು. ಮಕ್ಕಳ ಭವಿಷ್ಯ ಉಜ್ವಲವಾಗಲಿ. ಹಿಂದಿನಿಂದಲೂ ಇಲ್ಲಿ ನಡೆದ ಕಾರ್ಯಕ್ರಮಗಳು ಯಶಸ್ವಿಯಾಗಿ ನೆರವೇರಿದೆ. ಯಾವುದೇ ಫಲಾಪೇಕ್ಷೆ ಇಲ್ಲದೇ ಸದಾ ಸೇವೆಯಲ್ಲಿ ಸಹಕರಿಸುತ್ತಿರುವ ಈ ಹಾಲ್ನ ಮಾಲೀಕರಿಗೆ ದೇವಿ ಒಳ್ಳೆಯದು ಮಾಡಲಿ ಎಂದು ಹಾರೈಸಿದರು.
ಈ ಸಂದರ್ಭದಲ್ಲಿ ಮಂಡಲದ ಅಧ್ಯಕ್ಷರಾದ ನಾಗೇಶ ಕುರ್ಡೆಕರ, ಪ್ರಮುಖರಾದ ನಯನಾ ನೀಲಾವರ, ನಗರಸಭೆ ಉಪಾಧ್ಯಕ್ಷರಾದ ಪಿ.ಪಿ.ನಾಯ್ಕ, ಸದಸ್ಯರಾದ ಹನುಮಂತ ತಳವಾರ, ಸಂದ್ಯಾ ಬಾಡ್ಕರ, ಮನೋಜ ಭಟ್, ಪಕ್ಷದ ಪದಾಧಿಕಾರಿಗಳು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.