News Karnataka Kannada
Friday, May 10 2024
ಉತ್ತರಕನ್ನಡ

ಕಾರವಾರ: ಹಸುವಿಗೆ ಡಿಕ್ಕಿ ಹೊಡೆದ ಖಾಸಗಿ ಬಸ್ಸು- ಸ್ಥಳೀಯರಿಂದ ಆಕ್ರೋಶ

Karwar: Private bus collides with cow, locals protest
Photo Credit : By Author

ಕಾರವಾರ: ಶಿರವಾಡ ಗ್ರಾಪಂ ವ್ಯಾಪ್ತಿಯ ಬಂಗಾರಪ್ಪ ನಗರದಲ್ಲಿ ಖಾಸಗಿ ಬಸ್ಸೊಂದು ಹಸುವಿಗೆ ಡಿಕ್ಕಿ ಹೊಡೆದ ಪರಿಣಾಮ ಜಾನುವಾರು ಸ್ಥಳದಲ್ಲೇ ಮೃತ ಪಟ್ಟಿದೆ.

ಶಿರವಾಡದ ಖಾಸಗಿ ರೆಸಾರ್ಟ್ ಒಂದರಲ್ಲಿ ಕಾರವಾರ ನೇವಲ್ ಬೇಸ್ ನ ಕಾಮಗಾರಿ ಗುತ್ತಿಗೆ ಪಡೆದಿರುವ ಕಂಪನಿಯೊಂದರ ಅಧಿಕಾರಿಗಳು ಹಾಗೂ ಕಾರ್ಮಿಕರಿಗೆ ವಸತಿ ಸೌಲಭ್ಯ ಕಲ್ಪಿಸಲಾಗಿದೆ. ಹೀಗಾಗಿ ಅವರನ್ನು ಕರೆದೊಯ್ಯುಲು ಹಾಗೂ ಕರೆತರಲು ಪ್ರತಿದಿನ ಹತ್ತಾರು ಬಸ್ಸುಗಳು ಈ ಮಾರ್ಗದಲ್ಲಿ ಸಂಚರಿಸುತ್ತವೆ. ಹೀಗೆ ಸಂಚರಿಸುವ ಬಸ್ಸುಗಳನ್ನು ಚಾಲಕರು ನಿರ್ಲಕ್ಷ್ಯತನದಿಂದ ಚಾಲನೆ ಮಾಡುತ್ತಿದ್ದು ಈ ಮೊದಲೇ ಹಲವಾರು ಜಾನುವಾರುಗಳು ಮೃತಪಟ್ಟಿವೆ.

ಸೋಮವಾರ ಸಂಭವಿಸಿದ ಘಟನೆಯಿಂದ ಕೆರಳಿದ ಸ್ಥಳೀಯರು ಬಸ್ಸನ್ನು ತಡೆದು ಚಾಲಕನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಸ್ಥಳಕ್ಕೆ ಕಾಮಗಾರಿ ಕಂಪನಿಯ ಅಧಿಕಾರಿಗಳನ್ನು ಕರೆಯಿಸುವಂತೆ ಹೇಳಿದ್ದು ಬಸ್ಸನ್ನು ಅಲ್ಲಿಯೇ ತಡೆ ಹಿಡಿದಿದ್ದಾರೆ. ಪದೇ ಪದೇ ಇಂತಹ ಘಟನೆಗಳಿಗೆ ಈ ಬಸ್ಸುಗಳು ಕಾರಣವಾಗುತ್ತಿದ್ದು ಮುಂದೆ ಇದು ಮಾನವರ ಜೀವ ಹಾನಿಗೂ ಕಾರಣವಾಗಬಹುದು ಎಂದು ಸ್ಥಳಿಯರು ಆತಂಕ ವ್ಯಕ್ತಪಡಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು