News Karnataka Kannada
Monday, April 29 2024
ಉತ್ತರಕನ್ನಡ

ಕಾರವಾರ: ಕ್ಷೇತ್ರದ ಅಭಿವೃದ್ಧಿ ಬಗ್ಗೆ ಮುಖ್ಯಮಂತ್ರಿ ಗಮನ ಸೆಳೆದ ರೂಪಾಲಿ ನಾಯ್ಕ

Karwar: Rupali Naik draws chief minister's attention to the development of the constituency
Photo Credit : By Author

ಕಾರವಾರ: ಕಾರವಾರ ಹಾಗೂ ಅಂಕೋಲಾ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಹಾಗೂ ಇತರ ಮಹತ್ವದ ವಿಷಯಗಳ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಶಾಸಕಿ ರೂಪಾಲಿ ಎಸ್.ನಾಯ್ಕ ಮಾತುಕತೆ ನಡೆಸಿದರು.

ಬೆಂಗಳೂರಿನ ವಿಧಾನಸೌಧ ಆವರಣದಲ್ಲಿ ನಡೆದ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತ ಫಲಾನುಭವಿಗಳಿಗೆ ಸೌಲಭ್ಯ ವಿತರಣಾ ಕಾರ್ಯಕ್ರಮದಲ್ಲಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರೊಂದಿಗೆ ಶಾಸಕರು ಪಾಲ್ಗೊಂಡಿದ್ದರು.

ಇದುವರೆಗೆ ಕ್ಷೇತ್ರದಲ್ಲಿ ಕೈಗೊಂಡ ಅಭಿವೃದ್ಧಿ ಕಾಮಗಾರಿಗಳು, ತುರ್ತಾಗಿ ಆಗಬೇಕಿರುವ ಅಭಿವೃದ್ಧಿ ಯೋಜನೆಗಳು ಹಾಗೂ ಕ್ಷೇತ್ರದ ಜನತೆ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಶಾಸಕರು ಮುಖ್ಯಮಂತ್ರಿ ಅವರ ಗಮನ ಸೆಳೆದರು.

ಶಾಸಕಿ ರೂಪಾಲಿ ಎಸ್.ನಾಯ್ಕ ಅವರಿಗೆ ಜೀವ ಬೆದರಿಕೆ ಕುರಿತು ಮಾಹಿತಿ ಪಡೆದ ಬಸವರಾಜ ಬೊಮ್ಮಾಯಿ, ಈ ಬಗ್ಗೆ ಸೂಕ್ತ ಭದ್ರತೆ ಒದಗಿಸುವುದಾಗಿ ಭರವಸೆ ನೀಡಿದರು.

ಈ ಕಾರ್ಯಕ್ರಮದಲ್ಲಿ ಹೆಂಜಾ ನಾಯ್ಕ ಸೈನಿಕ ತರಬೇತಿ ಶಾಲೆಯ ಮೊದಲ ಬ್ಯಾಚ್‌ನ ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮುಖಾಂತರ ಪ್ರಮಾಣ ಪತ್ರವನ್ನು ವಿತರಿಸಿದರು. ಅಲ್ಲದೇ, ಅನೇಕ ಫಲಾನುಭವಿಗಳಿಗೆ ನೇರವಾಗಿ ಅವರ ಖಾತೆಗೆ ಹಣವನ್ನು ವರ್ಗಾಯಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು